<p><strong>ಗುಬ್ಬಿ</strong>: ಪಟ್ಟಣದ ನ್ಯಾಯಾಲಯದಲ್ಲಿ 7,170 ಪ್ರಕರಣಗಳು ಬಾಕಿ ಇದ್ದು, ಲೋಕ್ ಅದಾಲತ್ನಲ್ಲಿ 1,417 ಪ್ರಕರಣ ತೆಗೆದುಕೊಳ್ಳಲಾಗಿತ್ತು. ಅವುಗಳಲ್ಲಿ 1,167 ಪ್ರಕರಣಗಳನ್ನು ಇತ್ಯರ್ಥಪಡಿಸುವ ಮೂಲಕ ಜಿಲ್ಲೆಯಲ್ಲಿಯೇ ಉತ್ತಮ ಸಾಧನೆ ಮಾಡಲಾಗಿದೆ ಎಂದು ನ್ಯಾಯಾಧೀಶೆ ಅನುಪಮ ಡಿ. ತಿಳಿಸಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿವಿಲ್ ವ್ಯಾಜ್ಯ, ಕೌಟುಂಬಿಕ ದೌರ್ಜನ್ಯ, ವಿವಾಹ ವಿಚ್ಛೇದನ ಪ್ರಕರಣ ಒಳಗೊಂಡಂತೆ ಸಣ್ಣ ಪುಟ್ಟ ಪ್ರಕರಣಗಳನ್ನು ಇತ್ಯರ್ಥಗೊಳಿಸುವ ಮೂಲಕ ಕಕ್ಷಿದಾರರಿಗೆ ನೆಮ್ಮದಿ ನೀಡಲಾಗಿದೆ. ಬ್ಯಾಂಕ್ಗಳಲ್ಲಿ ಸುಸ್ತಿಯಾಗಿದ್ದ ಹಣವನ್ನು ಕಕ್ಷಿದಾರರಿಂದ ಕಟ್ಟಿಸುವ ಮೂಲಕ 2.5 ಕೋಟಿ ವಸೂಲಾತಿಯಾಗಿದೆ ಎಂದು ಹೇಳಿದರು.</p>.<p>ನ್ಯಾಯಾಧೀಶೆ ಪೂರ್ಣಿಮಾ ಕೆ. ಯಾದವ್ ಮಾತನಾಡಿ, ವಿಚ್ಛೇದನಕ್ಕೆ ಮುಂದಾಗಿದ್ದ ದಂಪತಿಗಳ ಮನವೊಲಿಸಿ ಒಂದುಗೂಡಿಸಲಾಗಿದೆ ಎಂದರು.</p>.<p>ನ್ಯಾಯಾಧೀಶರಾದ ಕಿರಣ್ ಎಸ್.ಪಿ., ಮೇಧ, ವಕೀಲರು, ವಕೀಲರ ಸಂಘದ ಅಧ್ಯಕ್ಷ, ಪದಾಧಿಕಾರಿಗಳು, ನ್ಯಾಯಾಲಯದ ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಬ್ಬಿ</strong>: ಪಟ್ಟಣದ ನ್ಯಾಯಾಲಯದಲ್ಲಿ 7,170 ಪ್ರಕರಣಗಳು ಬಾಕಿ ಇದ್ದು, ಲೋಕ್ ಅದಾಲತ್ನಲ್ಲಿ 1,417 ಪ್ರಕರಣ ತೆಗೆದುಕೊಳ್ಳಲಾಗಿತ್ತು. ಅವುಗಳಲ್ಲಿ 1,167 ಪ್ರಕರಣಗಳನ್ನು ಇತ್ಯರ್ಥಪಡಿಸುವ ಮೂಲಕ ಜಿಲ್ಲೆಯಲ್ಲಿಯೇ ಉತ್ತಮ ಸಾಧನೆ ಮಾಡಲಾಗಿದೆ ಎಂದು ನ್ಯಾಯಾಧೀಶೆ ಅನುಪಮ ಡಿ. ತಿಳಿಸಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿವಿಲ್ ವ್ಯಾಜ್ಯ, ಕೌಟುಂಬಿಕ ದೌರ್ಜನ್ಯ, ವಿವಾಹ ವಿಚ್ಛೇದನ ಪ್ರಕರಣ ಒಳಗೊಂಡಂತೆ ಸಣ್ಣ ಪುಟ್ಟ ಪ್ರಕರಣಗಳನ್ನು ಇತ್ಯರ್ಥಗೊಳಿಸುವ ಮೂಲಕ ಕಕ್ಷಿದಾರರಿಗೆ ನೆಮ್ಮದಿ ನೀಡಲಾಗಿದೆ. ಬ್ಯಾಂಕ್ಗಳಲ್ಲಿ ಸುಸ್ತಿಯಾಗಿದ್ದ ಹಣವನ್ನು ಕಕ್ಷಿದಾರರಿಂದ ಕಟ್ಟಿಸುವ ಮೂಲಕ 2.5 ಕೋಟಿ ವಸೂಲಾತಿಯಾಗಿದೆ ಎಂದು ಹೇಳಿದರು.</p>.<p>ನ್ಯಾಯಾಧೀಶೆ ಪೂರ್ಣಿಮಾ ಕೆ. ಯಾದವ್ ಮಾತನಾಡಿ, ವಿಚ್ಛೇದನಕ್ಕೆ ಮುಂದಾಗಿದ್ದ ದಂಪತಿಗಳ ಮನವೊಲಿಸಿ ಒಂದುಗೂಡಿಸಲಾಗಿದೆ ಎಂದರು.</p>.<p>ನ್ಯಾಯಾಧೀಶರಾದ ಕಿರಣ್ ಎಸ್.ಪಿ., ಮೇಧ, ವಕೀಲರು, ವಕೀಲರ ಸಂಘದ ಅಧ್ಯಕ್ಷ, ಪದಾಧಿಕಾರಿಗಳು, ನ್ಯಾಯಾಲಯದ ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>