ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ ರಾಜೇಂದ್ರ ಮಾತನಾಡಿ, ' ಜೆಡಿಎಸ್ ಗೆ ಕ್ಷೇತ್ರ ಬಿಟ್ಟು ಕೊಟ್ಟಿರುವುದು ಯಾವ ಕಾರಣಕ್ಕೆ ಎಂಬುದೇ ಗೊತ್ತಾಗುತ್ತಿಲ್ಲ. ಹಾಲಿ ಸಂಸದರಿದ್ದೂ ಬಿಟ್ಟು ಕೊಟ್ಟಿರುವುದು ಬೇರೆ ಬೇರೆ ರೀತಿಯಲ್ಲಿ ಸಂದೇಶ ಹೋಗುತ್ತದೆ. ಹೀಗಾಗಿ ಕಾಂಗ್ರೆಸ್ ನಿಂದ ಮುದ್ದ ಹನುಮೇಗೌಡರಿಗೆ ಟಿಕೆಟ್ ಕೊಡಬೇಕು ಎಂದು ಒತ್ತಾಯ ಮಾಡಿದರು.