ರಾಜ್ಯದಿಂದ 26 ಬಿಜೆಪಿ ಸಂಸತ್ ಸದಸ್ಯರನ್ನು ಆಯ್ಕೆ ಮಾಡಿ ಕಳುಹಿಸಿದ್ದರೂ ರಾಜ್ಯಕ್ಕೆ ಏನು ಕೊಡುಗೆ ಕೊಟ್ಟಿದ್ದೀರಿ? ಒಂದು ದಿನವೂ ಅಭಿವೃದ್ಧಿ ಬಗ್ಗೆ ಮಾತನಾಡಲಿಲ್ಲ. ಕೇವಲ ಐಟಿ, ಇಡಿ, ಸಿಬಿಐ ಮುಂದಿಟ್ಟುಕೊಂಡು ಬೆದರಿಸಿ ಜೈಲಿಗೆ ಕಳುಹಿಸುವ ಕೆಲಸ ಮಾಡುತ್ತಿದ್ದೀರಿ. ಇಲ್ಲ ಸಲ್ಲದ ಆರೋಪಗಳನ್ನು ಹೊರಿಸಿ ದೆಹಲಿ ಮುಖ್ಯಮಂತ್ರಿಯನ್ನು ಜೈಲಿಗೆ ತಳ್ಳಿದ್ದೀರಿ. ಇದನ್ನು ಪ್ರಜಾಪ್ರಭುತ್ವ ಎಂದು ಕರೆಯಬೇಕೆ ಎಂದು ಕೇಳಿದರು.