ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀರಾವರಿ ಯೋಜನೆ, ಹೊಸ ಕೃಷಿ ನೀತಿ ಜಾರಿ: ಎಚ್‌.ಡಿ. ಕುಮಾರಸ್ವಾಮಿ ಭರವಸೆ

ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಪರ ಪ್ರಚಾರದಲ್ಲಿ ಎಚ್‌.ಡಿ. ಕುಮಾರಸ್ವಾಮಿ ಭರವಸೆ
Published 13 ಏಪ್ರಿಲ್ 2024, 14:30 IST
Last Updated 13 ಏಪ್ರಿಲ್ 2024, 14:30 IST
ಅಕ್ಷರ ಗಾತ್ರ

ತಿಪಟೂರು: ‘ರಾಜ್ಯದ ನೀರಾವರಿ ಯೋಜನೆಗಳ ಸಮರ್ಪಕ ಅನುಷ್ಠಾನ ಹಾಗೂ ಹೊಸ ಕೃಷಿ ನೀತಿಗಳನ್ನು ಜಾರಿಗಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ’ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ತಾಲ್ಲೂಕಿನ ನೊಣವಿನಕೆರೆಯಲ್ಲಿ ಶನಿವಾರ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಪರ ಮತಯಾಚನೆ ಹಾಗೂ ರೋಡ್‌ ಶೋದಲ್ಲಿ ಮಾತನಾಡಿದರು.

‘ಯಡಿಯೂರಪ್ಪ ಹಾಗೂ ನನ್ನ ಅವಧಿಯಲ್ಲಿ ಅನುಷ್ಠಾನಗೊಂಡ ಸಾಲ ಮನ್ನಾ, ಭಾಗ್ಯಲಕ್ಷ್ಮಿಯಂತಹ ಉತ್ತಮ ಯೋಜನೆಗಳು ಮರುಕಳಿಸಬೇಕು’ ಎಂದರು.

ಕೊಬ್ಬರಿ ಬೆಲೆ ಕಡಿಮೆಯಾಗಿದ್ದು, ಮುಂದಿನ ದಿನಗಳಲ್ಲಿ ₹16 ಸಾವಿರಕ್ಕೆ ಹೆಚ್ಚಿಸಲಾಗುವುದು ಎಂದರು.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ಮಾತನಾಡಿ, ಕಾರ್ಯಕರ್ತರು ಮತಗಟ್ಟೆಗಳಲ್ಲಿ ಸರಿಯಾಗಿ ಕೆಲಸ ಮಾಡಿದರೆ ಸೋಮಣ್ಣ ಎರಡು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸತ್ತಾರೆ ಎಂದು ಆಶಾಭಾವ ವ್ಯಕ್ತಪಡಿಸಿದರು.

ತಿಪಟೂರು ತಾಲ್ಲೂಕಿನ ನೊಣವಿನಕೆರೆಯಲ್ಲಿ ವಿ.ಸೋಮಣ್ಣ ಪರ ಮತಯಾಚಿಸಿದ ಕುಮಾರಸ್ವಾಮಿ ವಿಜಯೇಂದ್ರ
ತಿಪಟೂರು ತಾಲ್ಲೂಕಿನ ನೊಣವಿನಕೆರೆಯಲ್ಲಿ ವಿ.ಸೋಮಣ್ಣ ಪರ ಮತಯಾಚಿಸಿದ ಕುಮಾರಸ್ವಾಮಿ ವಿಜಯೇಂದ್ರ

ಮಾಜಿ ಸಚಿವ ಬಿ.ಸಿ. ನಾಗೇಶ್ ಮಾತನಾಡಿದರು. ರಾಜ್ಯಸಭಾ ಸದಸ್ಯ ಜಗ್ಗೇಶ್, ಶಾಸಕ ಕೃಷ್ಣಪ್ಪ, ಮಾಜಿ ಶಾಸಕ ಮಸಾಲ ಜಯರಾಂ, ಶಾಂತಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಂಗರಾಜು, ಗುಲಾಬಿ ಸುರೇಶ್, ಆಯರಹಳ್ಳಿ ಶಂಕರಪ್ಪ, ಬಿಸಲೇಹಳ್ಳಿ ಜಗದೀಶ್ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT