‘ಈವರೆಗೆ ಆಡಳಿತ ನಡೆಸಿದ ರಾಜಕೀಯ ಪಕ್ಷಗಳು ಜನ, ರೈತ, ಕಾರ್ಮಿಕರ ಅಭಿವೃದ್ಧಿಗೆ ಯಾವುದೇ ಕೊಡುಗೆ ನೀಡಿಲ್ಲ. ಬಿಜೆಪಿ ಸೇರಿದಂತೆ ಎಲ್ಲ ಪಕ್ಷಗಳು ಉದ್ಯಮಿಗಳಿಂದ ದೇಣಿಗೆ ಪಡೆದುಕೊಂಡಿವೆ. ಚುನಾವಣಾ ಬಾಂಡ್ ಮೂಲಕ ದೇಣಿಗೆ ಪಡೆಯುವಲ್ಲಿ ಬಿಜೆಪಿಗೆ ಅಗ್ರಸ್ಥಾನ ಇದೆ. ಕೇಂದ್ರ ಸರ್ಕಾರ ಜನರ ಹಿತಾಸಕ್ತಿ ಕಾಪಾಡುತ್ತಿಲ್ಲ ಎಂದು ಎಸ್ಯುಸಿಐ ರಾಜ್ಯ ನಾಯಕ ಶಶಿಧರ್ ಇಲ್ಲಿ ಶನಿವಾರ ಟೀಕಿಸಿದರು.