‘ಬದಲಾಗುತ್ತಿರುವ ರಾಜಕೀಯ ಪರಿಸ್ಥಿತಿಯಲ್ಲಿ ಕುಂಚಿಟಿಗ ನಾಯಕರಿಗೆ ಸೂಕ್ತ ಸ್ಥಾನಮಾನ, ಅವಕಾಶಗಳು ಕೈ ತಪ್ಪುತ್ತಿವೆ. ಸಮುದಾಯದಲ್ಲಿನ ಸಂಘಟನಾ ಕೊರತೆಯಿಂದ ನಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ. ಸಮುದಾಯ ಎಚ್ಚೆತ್ತುಕೊಳ್ಳಬೇಕು. ಪ್ರಸ್ತುತ ಪರಿಸ್ಥಿತಿಯಲ್ಲಿ ಮುರಳೀಧರ ಹಾಲಪ್ಪ ಎಲ್ಲ ವರ್ಗದವರ ಜತೆ ಬೆರೆತು, ಎಲ್ಲರ ವಿಶ್ವಾಸ ಗಳಿಸುತ್ತಿದ್ದಾರೆ. ಕುಂಚಿಟಿಗ ಸಮುದಾಯ ಅವರಿಗೆ ಶಕ್ತಿ ತುಂಬಬೇಕು’ ಎಂದು ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದರು.