<p><strong>ತುಮಕೂರು: </strong>ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ಜಿಲ್ಲೆಯ ಐದು ದಂಪತಿ ಮತ್ತೆ ಒಂದಾಗಿದ್ದಾರೆ.</p>.<p>ಜಿಲ್ಲಾ ನ್ಯಾಯಾಲಯದಲ್ಲಿ ಶನಿವಾರ ನಡೆದ ಲೋಕ ಅದಾಲತ್ನಲ್ಲಿ ಹಿಂದಿನ ಎಲ್ಲಾ ಮನಸ್ತಾಪಗಳನ್ನು ಬದಿಗಿಟ್ಟು 5 ದಂಪತಿ ಮತ್ತೆ ಒಂದಾದರು. ಇದು ಎರಡೂ ಕಡೆಯ ಕುಟುಂಬದ ಸದಸ್ಯರು, ಸ್ನೇಹಿತರ ಸಂತಸಕ್ಕೆ ಕಾರಣವಾಯಿತು.</p>.<p>ನ್ಯಾಯಾಧೀಶರು, ವಕೀಲರ ಸಲಹೆಯಂತೆ ವಿಚ್ಛೇದನ ಅರ್ಜಿ ಹಿಂಪಡೆದು, ಪರಸ್ಪರ ಹಾರ ಬದಲಾಯಿಸಿಕೊಳ್ಳುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾದರು. ಜಿಲ್ಲಾ ನ್ಯಾಯಾಲಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಐವರು ದಂಪತಿ ಲೋಕ ಅದಾಲತ್ನಲ್ಲಿ ಒಂದಾಗಿದ್ದಾರೆ ಎಂದು ವಕೀಲರೊಬ್ಬರು ತಿಳಿಸಿದರು.</p>.<p>ಕೌಟುಂಬಿಕ ಜಿಲ್ಲಾ ನ್ಯಾಯಾಧೀಶ ಎನ್. ಮುನಿರಾಜು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ, ಆಡಳಿತಾಧಿಕಾರಿ ನರಸಿಂಹಪ್ಪ, ಆಡಳಿತ ಶಿರಸ್ತೇದಾರರಾದ ಎಂ.ಕೆ. ಜಗದೀಶ್, ನವೀನ್ಕುಮಾರ್, ಗೋವಿಂದರಾಜು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ಜಿಲ್ಲೆಯ ಐದು ದಂಪತಿ ಮತ್ತೆ ಒಂದಾಗಿದ್ದಾರೆ.</p>.<p>ಜಿಲ್ಲಾ ನ್ಯಾಯಾಲಯದಲ್ಲಿ ಶನಿವಾರ ನಡೆದ ಲೋಕ ಅದಾಲತ್ನಲ್ಲಿ ಹಿಂದಿನ ಎಲ್ಲಾ ಮನಸ್ತಾಪಗಳನ್ನು ಬದಿಗಿಟ್ಟು 5 ದಂಪತಿ ಮತ್ತೆ ಒಂದಾದರು. ಇದು ಎರಡೂ ಕಡೆಯ ಕುಟುಂಬದ ಸದಸ್ಯರು, ಸ್ನೇಹಿತರ ಸಂತಸಕ್ಕೆ ಕಾರಣವಾಯಿತು.</p>.<p>ನ್ಯಾಯಾಧೀಶರು, ವಕೀಲರ ಸಲಹೆಯಂತೆ ವಿಚ್ಛೇದನ ಅರ್ಜಿ ಹಿಂಪಡೆದು, ಪರಸ್ಪರ ಹಾರ ಬದಲಾಯಿಸಿಕೊಳ್ಳುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾದರು. ಜಿಲ್ಲಾ ನ್ಯಾಯಾಲಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಐವರು ದಂಪತಿ ಲೋಕ ಅದಾಲತ್ನಲ್ಲಿ ಒಂದಾಗಿದ್ದಾರೆ ಎಂದು ವಕೀಲರೊಬ್ಬರು ತಿಳಿಸಿದರು.</p>.<p>ಕೌಟುಂಬಿಕ ಜಿಲ್ಲಾ ನ್ಯಾಯಾಧೀಶ ಎನ್. ಮುನಿರಾಜು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ, ಆಡಳಿತಾಧಿಕಾರಿ ನರಸಿಂಹಪ್ಪ, ಆಡಳಿತ ಶಿರಸ್ತೇದಾರರಾದ ಎಂ.ಕೆ. ಜಗದೀಶ್, ನವೀನ್ಕುಮಾರ್, ಗೋವಿಂದರಾಜು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>