ತುಮಕೂರು: ಇಲ್ಲಿಯ ಮಹಾನಗರ ಪಾಲಿಕೆಯ ಮೇಲೆ ಶುಕ್ರವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಎಸ್.ಪಿ ವಲೀಬಾಷ ನೇತೃತ್ವದ ತಂಡ ದಾಳಿ ನಡೆಸಿದೆ. ಕಂದಾಯ, ಎಂಜಿನಿಯರಿಂಗ್ ಸೇರಿದಂತೆ ಇತರೆ ವಿಭಾಗದಲ್ಲಿ ದಾಖಲೆಗಳ ಪರಿಶೀಲನೆ ಮಾಡುತ್ತಿದ್ದಾರೆ.
ಸಾರ್ವಜನಿಕರು ಲೋಕಾಯುಕ್ತಗೆ ನೀಡಿದ ದೂರಿನ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.