ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಾಯುಕ್ತ ಬಲೆಗೆ ಬಿಸಿಎಂ ಇಲಾಖೆ ಅಧಿಕಾರಿ

Last Updated 8 ಮಾರ್ಚ್ 2023, 13:43 IST
ಅಕ್ಷರ ಗಾತ್ರ

ಚಿಕ್ಕನಾಯಕನಹಳ್ಳಿ: ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಭಾರ ಅಧಿಕಾರಿ ಶಿವರಾಜ್ ಎನ್. ಎಲಿಗಾರ್ ಬುಧವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಪಟ್ಟಣದ ನಿವಾಸಿ ರಾಜು ಎಂಬುವರ ದೂರಿನ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ₹34 ಸಾವಿರ ಲಂಚ ಪಡೆಯುವಾಗ ಶಿವರಾಜ್ ಎನ್. ಎಲಿಗಾರ್ ಅವರನ್ನು ವಶಕ್ಕೆ ಪಡೆದಿದ್ದಾರೆ. ರಾಜು ಇಲಾಖೆಗೆ ಬಿಟ್ಟಿದ್ದ ಕಾರಿನ ತಿಂಗಳ ಬಾಡಿಗೆ ಬಿಲ್ ಪಾವತಿಸಬೇಕಿತ್ತು. ಬಿಲ್ ಮಾಡಿಕೊಡಲು ₹34 ಸಾವಿರ ಲಂಚಕ್ಕೆ ಒತ್ತಾಯಿಸಿದ್ದರು.

ಲೋಕಾಯುಕ್ತ ಡಿವೈಎಸ್‌ಪಿಗಳಾದ ಮಂಜುನಾಥ್, ಹರೀಶ್, ಇನ್ಸ್‌ಪೆಕ್ಟರ್ ರಾಮರೆಡ್ಡಿ, ಸಲೀಮ್ ನೇತೃತ್ವದ ತಂಡ ದಾಳಿ ನಡೆಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT