<p><strong>ಕುಣಿಗಲ್:</strong> ‘ಹಿಟ್ ಆ್ಯಂಡ್ ರನ್’ ಪ್ರಕರಣಗಳಲ್ಲಿ ಚಾಲಕರಿಗೆ ಕಠಿಣ ಶಿಕ್ಷೆ ಮತ್ತು ದಂಡ ವಿಧಿಸುವ ಕೇಂದ್ರದ ನಿಯಮ ಖಂಡಿಸಿ ಲಾರಿ, ಟ್ರಕ್ ಚಾಲಕರು ಶುಕ್ರವಾರ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಉಪತಹಶೀಲ್ದಾರ್ ಯೋಗೀಶ್ ಅವರಿಗೆ ಮನವಿ ಸಲ್ಲಿಸಿದರು.</p>.<p>ಪ್ರತಿಭಟನಾ ಮೆರವಣಿಗೆಯಲ್ಲಿ ಬಂದ ಚಾಲಕರು ತಾಲ್ಲೂಕು ಕಚೇರಿ ಮುಂದೆ ಸಭೆ ನಡೆಸಿದರು.</p>.<p>ಮುಖ್ಯಸ್ಥ ಶಿವು ಮಾತನಾಡಿ, ಕೇಂದ್ರ ಸರ್ಕಾರದ ನಿಲುವು ಜನವಿರೋಧಿ. ಚಾಲಕರು ಶ್ರೀಮಂತರಲ್ಲ. ‘ಹಿಟ್ ಅ್ಯಂಡ್ ರನ್’ ಪ್ರಕರಣಗಳಲ್ಲಿ ಕಠಿಣ ಶಿಕ್ಷೆ ಜತೆಗೆ ₹7 ಲಕ್ಷ ದಂಡ ವಿಧಿಸುವ ನಿರ್ಣಯದ ಮಾನದಂಡಗಳ ಬಗ್ಗೆ ಸ್ಪಷ್ಟ ಮಾಹಿತಿ ಪಡೆಯದೆ ತೀರ್ಮಾನ ತೆಗೆದುಕೊಳ್ಳುವುದರಿಂದ ಚಾಲಕರ ಕುಟುಂಬಗಳು ಬೀದಿಪಾಲಾಗಬೇಕಾಗುತ್ತದೆ ಎಂದರು.</p>.<p>ಪ್ರತಿಭಟನೆಯಲ್ಲಿ ಚಾಲಕರಾದ ರಂಗಣ್ಣ, ರಮೇಶ್, ನಾಗರಾಜು ಅಬ್ದುಲ್ ಪಾಷಾ, ಪ್ರಜ್ವಲ್, ಕೆಆರ್ಎಸ್ ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ನಾಗರಾಜು ಮತ್ತು ಪದಾಧಿಕಾರಿಗಳು ಭಾಗವಹಿಸಿದ್ದರು..</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಣಿಗಲ್:</strong> ‘ಹಿಟ್ ಆ್ಯಂಡ್ ರನ್’ ಪ್ರಕರಣಗಳಲ್ಲಿ ಚಾಲಕರಿಗೆ ಕಠಿಣ ಶಿಕ್ಷೆ ಮತ್ತು ದಂಡ ವಿಧಿಸುವ ಕೇಂದ್ರದ ನಿಯಮ ಖಂಡಿಸಿ ಲಾರಿ, ಟ್ರಕ್ ಚಾಲಕರು ಶುಕ್ರವಾರ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಉಪತಹಶೀಲ್ದಾರ್ ಯೋಗೀಶ್ ಅವರಿಗೆ ಮನವಿ ಸಲ್ಲಿಸಿದರು.</p>.<p>ಪ್ರತಿಭಟನಾ ಮೆರವಣಿಗೆಯಲ್ಲಿ ಬಂದ ಚಾಲಕರು ತಾಲ್ಲೂಕು ಕಚೇರಿ ಮುಂದೆ ಸಭೆ ನಡೆಸಿದರು.</p>.<p>ಮುಖ್ಯಸ್ಥ ಶಿವು ಮಾತನಾಡಿ, ಕೇಂದ್ರ ಸರ್ಕಾರದ ನಿಲುವು ಜನವಿರೋಧಿ. ಚಾಲಕರು ಶ್ರೀಮಂತರಲ್ಲ. ‘ಹಿಟ್ ಅ್ಯಂಡ್ ರನ್’ ಪ್ರಕರಣಗಳಲ್ಲಿ ಕಠಿಣ ಶಿಕ್ಷೆ ಜತೆಗೆ ₹7 ಲಕ್ಷ ದಂಡ ವಿಧಿಸುವ ನಿರ್ಣಯದ ಮಾನದಂಡಗಳ ಬಗ್ಗೆ ಸ್ಪಷ್ಟ ಮಾಹಿತಿ ಪಡೆಯದೆ ತೀರ್ಮಾನ ತೆಗೆದುಕೊಳ್ಳುವುದರಿಂದ ಚಾಲಕರ ಕುಟುಂಬಗಳು ಬೀದಿಪಾಲಾಗಬೇಕಾಗುತ್ತದೆ ಎಂದರು.</p>.<p>ಪ್ರತಿಭಟನೆಯಲ್ಲಿ ಚಾಲಕರಾದ ರಂಗಣ್ಣ, ರಮೇಶ್, ನಾಗರಾಜು ಅಬ್ದುಲ್ ಪಾಷಾ, ಪ್ರಜ್ವಲ್, ಕೆಆರ್ಎಸ್ ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ನಾಗರಾಜು ಮತ್ತು ಪದಾಧಿಕಾರಿಗಳು ಭಾಗವಹಿಸಿದ್ದರು..</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>