<p><strong>ತುಮಕೂರು: </strong>ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಬೆಲೆ ಇಳಿಕೆ ಮಾಡುವಂತೆ ಆಗ್ರಹಿಸಿ ಜಿಲ್ಲಾ ಲಾರಿ ಮಾಲೀಕರ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವದಲ್ಲಿ ಲಾರಿ ಮಾಲೀಕರು ಜಾಸ್ ಟೋಲ್ ಸಮೀಪ ಶುಕ್ರವಾರ ಸಾಂಕೇತಿಕವಾಗಿ ಪ್ರತಿಭಟಿಸಿದರು.</p>.<p>ಲಾರಿ ಮಾಲೀಕರ ರಾಜ್ಯ ಸಂಘ ಲಾರಿ ಮುಷ್ಕರಕ್ಕೆ ಕರೆ ನೀಡಿದ್ದು, ಜಿಲ್ಲೆಯಲ್ಲೂ ಲಾರಿಗಳು, ಸರಕು ಸಾಗಣೆ ವಾಹನಗಳು ಸಂಚರಿಸಲಿಲ್ಲ. ಮುಷ್ಕರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.</p>.<p>ಸಂಘದ ಅಧ್ಯಕ್ಷ ಮುಜ್ಬೀಲ್ ಪಾಷ, ‘ಕೇಂದ್ರ ಸರ್ಕಾರ ರೂಪಿಸು<br />ತ್ತಿರುವ ಕಾನೂನುಗಳು ಲಾರಿ ಮಾಲೀಕರಿಗೆ ಸಂಕಷ್ಟವನ್ನುಂಟು ಮಾಡುತ್ತಿವೆ. ದಿನೆದಿನೇ ಡೀಸೆಲ್ ಬೆಲೆ ಏರಿಕೆಯಾಗುತ್ತಿದ್ದು, ಸರಕು ಸಾಗಣೆ ಕಷ್ಟಕರವಾಗಿದೆ. ಕೇಂದ್ರ ಸರ್ಕಾರ ದಿನಕ್ಕೊಂದು ಕಾನೂನು ರೂಪಿಸುತ್ತಿದೆ’ ಎಂದು ಆರೋಪಿಸಿದರು.</p>.<p>ಕೇಂದ್ರ ಸರ್ಕಾರದ ‘ಇವೇ ಬಿಲ್’ನಲ್ಲಿ ಸರಿಯಾದ ಸಮಯಕ್ಕೆ ಲಾರಿ ಓಡಿಸಲು ಆಗುವುದಿಲ್ಲ. ಸಮಯಕ್ಕೆ ಹೋಗದಿದ್ದರೆ ಲಾರಿ ಮಾಲೀಕರು, ಸರಬರಾಜುದಾರರಿಗೆ ದಂಡ ವಿಧಿಸಲಾಗುತ್ತದೆ. ದಿನಕ್ಕೆ 200 ಕಿ.ಮೀ ಓಡಾಟಕ್ಕೆ ಅವಕಾಶ ನೀಡಿರುವ ಇವೇ ಕಾನೂನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.</p>.<p>ಲಾರಿ ಮಾಲೀಕರು ವಿಷ ಕುಡಿಯುವಂತಹ ಪರಿಸ್ಥಿತಿ ನಿರ್ಮಾಣ<br />ವಾಗಿದೆ. ರೈತರು ಕಳೆದ ಮೂರು ತಿಂಗಳಿಂದ ಹೋರಾಡುತ್ತಿದ್ದರೂ ಸ್ಪಂದಿಸುತ್ತಿಲ್ಲ. ಅಚ್ಛೇದಿನ್ ಬರಲಿಲ್ಲ. ಬುಲೆಟ್ ಟ್ರೈನ್ ಬದಲಾಗಿ ಇರುವ ರೈಲುಗಳನ್ನೇ ಮಾರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.</p>.<p>‘ಹಳೆ ವಾಹನಗಳ ಸಂಚಾರ ರದ್ದು<br />ಗೊಳಿಸಿದರೆ ಲಾರಿ ಮಾಲೀಕರು ಎಲ್ಲಿಗೆ ಹೋಗಬೇಕು. ಹಳೆವಾಹನಗಳಿಂದ ಪರಿಸರಕ್ಕೆ ಹಾನಿಯಾಗುತ್ತಿದ್ದರೆ ವಾಹನಗಳ ಎಂಜಿನ್ ಬದಲಾಯಿಸಲು ಸಿದ್ಧರಿದ್ದೇವೆ. ಅದು ಬಿಟ್ಟು ಇಡೀ ವಾಹನವನ್ನೇ ರದ್ದಿಗೆ ಹಾಕಿದರೆ ಏನು ಪ್ರಯೋಜನ’ ಎಂದು ಪ್ರಶ್ನಿಸಿದರು.</p>.<p>ಸಂಘದ ಮುಖಂಡರಾದ ಶಕೀಲ್, ಯೂಸೂಫ್, ಪರ್ವೀಜ್, ರಘು, ದಯಾ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಬೆಲೆ ಇಳಿಕೆ ಮಾಡುವಂತೆ ಆಗ್ರಹಿಸಿ ಜಿಲ್ಲಾ ಲಾರಿ ಮಾಲೀಕರ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವದಲ್ಲಿ ಲಾರಿ ಮಾಲೀಕರು ಜಾಸ್ ಟೋಲ್ ಸಮೀಪ ಶುಕ್ರವಾರ ಸಾಂಕೇತಿಕವಾಗಿ ಪ್ರತಿಭಟಿಸಿದರು.</p>.<p>ಲಾರಿ ಮಾಲೀಕರ ರಾಜ್ಯ ಸಂಘ ಲಾರಿ ಮುಷ್ಕರಕ್ಕೆ ಕರೆ ನೀಡಿದ್ದು, ಜಿಲ್ಲೆಯಲ್ಲೂ ಲಾರಿಗಳು, ಸರಕು ಸಾಗಣೆ ವಾಹನಗಳು ಸಂಚರಿಸಲಿಲ್ಲ. ಮುಷ್ಕರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.</p>.<p>ಸಂಘದ ಅಧ್ಯಕ್ಷ ಮುಜ್ಬೀಲ್ ಪಾಷ, ‘ಕೇಂದ್ರ ಸರ್ಕಾರ ರೂಪಿಸು<br />ತ್ತಿರುವ ಕಾನೂನುಗಳು ಲಾರಿ ಮಾಲೀಕರಿಗೆ ಸಂಕಷ್ಟವನ್ನುಂಟು ಮಾಡುತ್ತಿವೆ. ದಿನೆದಿನೇ ಡೀಸೆಲ್ ಬೆಲೆ ಏರಿಕೆಯಾಗುತ್ತಿದ್ದು, ಸರಕು ಸಾಗಣೆ ಕಷ್ಟಕರವಾಗಿದೆ. ಕೇಂದ್ರ ಸರ್ಕಾರ ದಿನಕ್ಕೊಂದು ಕಾನೂನು ರೂಪಿಸುತ್ತಿದೆ’ ಎಂದು ಆರೋಪಿಸಿದರು.</p>.<p>ಕೇಂದ್ರ ಸರ್ಕಾರದ ‘ಇವೇ ಬಿಲ್’ನಲ್ಲಿ ಸರಿಯಾದ ಸಮಯಕ್ಕೆ ಲಾರಿ ಓಡಿಸಲು ಆಗುವುದಿಲ್ಲ. ಸಮಯಕ್ಕೆ ಹೋಗದಿದ್ದರೆ ಲಾರಿ ಮಾಲೀಕರು, ಸರಬರಾಜುದಾರರಿಗೆ ದಂಡ ವಿಧಿಸಲಾಗುತ್ತದೆ. ದಿನಕ್ಕೆ 200 ಕಿ.ಮೀ ಓಡಾಟಕ್ಕೆ ಅವಕಾಶ ನೀಡಿರುವ ಇವೇ ಕಾನೂನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.</p>.<p>ಲಾರಿ ಮಾಲೀಕರು ವಿಷ ಕುಡಿಯುವಂತಹ ಪರಿಸ್ಥಿತಿ ನಿರ್ಮಾಣ<br />ವಾಗಿದೆ. ರೈತರು ಕಳೆದ ಮೂರು ತಿಂಗಳಿಂದ ಹೋರಾಡುತ್ತಿದ್ದರೂ ಸ್ಪಂದಿಸುತ್ತಿಲ್ಲ. ಅಚ್ಛೇದಿನ್ ಬರಲಿಲ್ಲ. ಬುಲೆಟ್ ಟ್ರೈನ್ ಬದಲಾಗಿ ಇರುವ ರೈಲುಗಳನ್ನೇ ಮಾರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.</p>.<p>‘ಹಳೆ ವಾಹನಗಳ ಸಂಚಾರ ರದ್ದು<br />ಗೊಳಿಸಿದರೆ ಲಾರಿ ಮಾಲೀಕರು ಎಲ್ಲಿಗೆ ಹೋಗಬೇಕು. ಹಳೆವಾಹನಗಳಿಂದ ಪರಿಸರಕ್ಕೆ ಹಾನಿಯಾಗುತ್ತಿದ್ದರೆ ವಾಹನಗಳ ಎಂಜಿನ್ ಬದಲಾಯಿಸಲು ಸಿದ್ಧರಿದ್ದೇವೆ. ಅದು ಬಿಟ್ಟು ಇಡೀ ವಾಹನವನ್ನೇ ರದ್ದಿಗೆ ಹಾಕಿದರೆ ಏನು ಪ್ರಯೋಜನ’ ಎಂದು ಪ್ರಶ್ನಿಸಿದರು.</p>.<p>ಸಂಘದ ಮುಖಂಡರಾದ ಶಕೀಲ್, ಯೂಸೂಫ್, ಪರ್ವೀಜ್, ರಘು, ದಯಾ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>