<p><strong>ಮಧುಗಿರಿ:</strong> ತಾಲ್ಲೂಕಿನಲ್ಲಿ ಜನವರಿಯಿಂದ ಜುಲೈ ಅಂತ್ಯದವರೆಗೆ ವಾಡಿಕೆ ಮಳೆ 231 ಮಿ.ಮೀ ಆಗಬೇಕಿತ್ತು. ಈ ಬಾರಿ 501 ಮಿ.ಮೀ ಮಳೆಯಾಗಿದ್ದು, ಈಗಾಗಲೇ ಶೇ 70ರಷ್ಟು ಬಿತ್ತನೆ ಪೂರ್ಣಗೊಂಡಿದೆ.</p>.<p>ತಾಲ್ಲೂಕಿನಲ್ಲಿ 35.673 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. ಈ ಪೈಕಿ ಈಗಾಗಲೇ 23.801 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಮುಂಬುರುವ ದಿನಗಳಲ್ಲಿ ಉತ್ತಮವಾಗಿ ಮಳೆಯಾದರೆ ಶೇ 96ರಷ್ಟು ಬಿತ್ತನೆಯಾಗುವ ಸಾಧ್ಯತೆಯಿದೆ ಎಂದು ಕೃಷಿ ಅಧಿಕಾರಿಗಳು ಹೇಳುತ್ತಾರೆ.</p>.<p>ತಾಲ್ಲೂಕಿನಲ್ಲಿ ಶೇಂಗಾ 14.010 ಹೆಕ್ಟೇರ್, ಮುಸಕಿನ ಜೋಳ 7 ಸಾವಿರ ಹೆಕ್ಟೇರ್, ರಾಗಿ 2 ಸಾವಿರ, ತೊಗರಿ 1,225 ಹೆಕ್ಟೇರ್, ಭತ್ತ 308 ಹಾಗೂ ಅಲಸಂದೆ 87 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ.</p>.<p>ಬಹುತೇಕ ಗ್ರಾಮಗಳಲ್ಲಿ ಉತ್ತಮವಾಗಿ ಮಳೆಯಾಗಿರುವುದರಿಂದ ಕೃಷಿ ಹೊಂಡ, ಕಾಲುವೆ ಹಾಗೂ ಚೆಕ್ ಡ್ಯಾಂಗಳಲ್ಲಿ ನೀರು ಶೇಖರಣೆಯಾಗಿದೆ. ಜಾನುವಾರು, ಮೇಕೆ ಮತ್ತು ಕುರಿಗಳಿಗೆ ಸದ್ಯಕ್ಕೆ ಮೇವಿಗೆ ತೊಂದರೆಯಿಲ್ಲ ಎನ್ನುತ್ತಾರೆ ಕುರಿಗಾಹಿಗಳು.</p>.<p>ಶೇಂಗಾ ಮತ್ತು ರಾಗಿ ಬಿತ್ತಿರುವ ಜಮೀನಿನಲ್ಲಿ ಕಳೆ ತೆಗೆಯುವ ಕಾರ್ಯ ಭರದಿಂದ ಸಾಗಿವೆ. ಇದರಿಂದಾಗಿ ಅನೇಕರಿಗೆ ಉದ್ಯೋಗವೂ ದೊರಕಿದಂತಾಗಿದೆ. ಲಾಕ್ಡೌನ್ನಿಂದ ಕೆಂಗಟ್ಟಿದ್ದ ಕೃಷಿ ಕಾರ್ಮಿಕರಿಗೆ ಮಳೆಯಿಂದಾಗಿ ಸ್ವಲ್ಪಮಟ್ಟಿಗೆ ಕೆಲಸ ದೊರಕಿದೆ ಎನ್ನುತ್ತಾರೆ ಕಾರ್ಮಿಕರಾದ ಶಾರದಮ್ಮ.</p>.<p>ತಾಲ್ಲೂಕಿನ ಕೊಡಿಗೇನಹಳ್ಳಿ, ಐ.ಡಿ.ಹಳ್ಳಿ ಹಾಗೂ ಪುರವರ ಹೋಬಳಿಯ ಗ್ರಾಮಗಳಲ್ಲಿ ಮುಸಕಿನ ಜೋಳ ಬೆಳೆಯಲು ರೈತರು ಹೆಚ್ಚು ಒಲವು ತೋರಿದ್ದಾರೆ. ಇದರ ಜೊತೆಗೆ ವಾಣಿಜ್ಯ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ಹೈನುಗಾರಿಕೆಯನ್ನು ದೊಡ್ಡ ಉದ್ಯಮವನ್ನಾಗಿ ಮಾಡಿಕೊಂಡು ಆರ್ಥಿಕವಾಗಿ ಸಬಲರಾಗುತ್ತಿದ್ದಾರೆ.</p>.<p>ಉತ್ತಮವಾಗಿ ಮಳೆಯಾಗಿ ಜಯಮಂಗಲ ನದಿ ಹಾಗೂ ಕುಮುದ್ವತಿ ನದಿಗಳು ಒಮ್ಮೆ ಹರಿದರೆ ಬಾವಿ ಮತ್ತು ಕೊಳವೆ ಬಾವಿಗಳಲ್ಲಿ ಅಂತರ್ಜಲ ವೃದ್ಧಿಯಾಗುತ್ತದೆ ಎನ್ನುತ್ತಾರೆ ಈ ಭಾಗದ ರೈತರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಧುಗಿರಿ:</strong> ತಾಲ್ಲೂಕಿನಲ್ಲಿ ಜನವರಿಯಿಂದ ಜುಲೈ ಅಂತ್ಯದವರೆಗೆ ವಾಡಿಕೆ ಮಳೆ 231 ಮಿ.ಮೀ ಆಗಬೇಕಿತ್ತು. ಈ ಬಾರಿ 501 ಮಿ.ಮೀ ಮಳೆಯಾಗಿದ್ದು, ಈಗಾಗಲೇ ಶೇ 70ರಷ್ಟು ಬಿತ್ತನೆ ಪೂರ್ಣಗೊಂಡಿದೆ.</p>.<p>ತಾಲ್ಲೂಕಿನಲ್ಲಿ 35.673 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. ಈ ಪೈಕಿ ಈಗಾಗಲೇ 23.801 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಮುಂಬುರುವ ದಿನಗಳಲ್ಲಿ ಉತ್ತಮವಾಗಿ ಮಳೆಯಾದರೆ ಶೇ 96ರಷ್ಟು ಬಿತ್ತನೆಯಾಗುವ ಸಾಧ್ಯತೆಯಿದೆ ಎಂದು ಕೃಷಿ ಅಧಿಕಾರಿಗಳು ಹೇಳುತ್ತಾರೆ.</p>.<p>ತಾಲ್ಲೂಕಿನಲ್ಲಿ ಶೇಂಗಾ 14.010 ಹೆಕ್ಟೇರ್, ಮುಸಕಿನ ಜೋಳ 7 ಸಾವಿರ ಹೆಕ್ಟೇರ್, ರಾಗಿ 2 ಸಾವಿರ, ತೊಗರಿ 1,225 ಹೆಕ್ಟೇರ್, ಭತ್ತ 308 ಹಾಗೂ ಅಲಸಂದೆ 87 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ.</p>.<p>ಬಹುತೇಕ ಗ್ರಾಮಗಳಲ್ಲಿ ಉತ್ತಮವಾಗಿ ಮಳೆಯಾಗಿರುವುದರಿಂದ ಕೃಷಿ ಹೊಂಡ, ಕಾಲುವೆ ಹಾಗೂ ಚೆಕ್ ಡ್ಯಾಂಗಳಲ್ಲಿ ನೀರು ಶೇಖರಣೆಯಾಗಿದೆ. ಜಾನುವಾರು, ಮೇಕೆ ಮತ್ತು ಕುರಿಗಳಿಗೆ ಸದ್ಯಕ್ಕೆ ಮೇವಿಗೆ ತೊಂದರೆಯಿಲ್ಲ ಎನ್ನುತ್ತಾರೆ ಕುರಿಗಾಹಿಗಳು.</p>.<p>ಶೇಂಗಾ ಮತ್ತು ರಾಗಿ ಬಿತ್ತಿರುವ ಜಮೀನಿನಲ್ಲಿ ಕಳೆ ತೆಗೆಯುವ ಕಾರ್ಯ ಭರದಿಂದ ಸಾಗಿವೆ. ಇದರಿಂದಾಗಿ ಅನೇಕರಿಗೆ ಉದ್ಯೋಗವೂ ದೊರಕಿದಂತಾಗಿದೆ. ಲಾಕ್ಡೌನ್ನಿಂದ ಕೆಂಗಟ್ಟಿದ್ದ ಕೃಷಿ ಕಾರ್ಮಿಕರಿಗೆ ಮಳೆಯಿಂದಾಗಿ ಸ್ವಲ್ಪಮಟ್ಟಿಗೆ ಕೆಲಸ ದೊರಕಿದೆ ಎನ್ನುತ್ತಾರೆ ಕಾರ್ಮಿಕರಾದ ಶಾರದಮ್ಮ.</p>.<p>ತಾಲ್ಲೂಕಿನ ಕೊಡಿಗೇನಹಳ್ಳಿ, ಐ.ಡಿ.ಹಳ್ಳಿ ಹಾಗೂ ಪುರವರ ಹೋಬಳಿಯ ಗ್ರಾಮಗಳಲ್ಲಿ ಮುಸಕಿನ ಜೋಳ ಬೆಳೆಯಲು ರೈತರು ಹೆಚ್ಚು ಒಲವು ತೋರಿದ್ದಾರೆ. ಇದರ ಜೊತೆಗೆ ವಾಣಿಜ್ಯ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ಹೈನುಗಾರಿಕೆಯನ್ನು ದೊಡ್ಡ ಉದ್ಯಮವನ್ನಾಗಿ ಮಾಡಿಕೊಂಡು ಆರ್ಥಿಕವಾಗಿ ಸಬಲರಾಗುತ್ತಿದ್ದಾರೆ.</p>.<p>ಉತ್ತಮವಾಗಿ ಮಳೆಯಾಗಿ ಜಯಮಂಗಲ ನದಿ ಹಾಗೂ ಕುಮುದ್ವತಿ ನದಿಗಳು ಒಮ್ಮೆ ಹರಿದರೆ ಬಾವಿ ಮತ್ತು ಕೊಳವೆ ಬಾವಿಗಳಲ್ಲಿ ಅಂತರ್ಜಲ ವೃದ್ಧಿಯಾಗುತ್ತದೆ ಎನ್ನುತ್ತಾರೆ ಈ ಭಾಗದ ರೈತರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>