<p><strong>ಮಧುಗಿರಿ:</strong> ಹೇಮಾವತಿ ಲಿಂಕ್ ಕೆನಾಲ್ನಿಂದ ತುಮಕೂರು ಜಿಲ್ಲೆ ಜನರಿಗೆ ಸಾಕಷ್ಟು ಅನ್ಯಾಯವಾಗಲಿದೆ. ತಕ್ಷಣ ಈ ಕಾಮಗಾರಿ ನಿಲ್ಲಿಸಬೇಕೆಂದು ಆಗ್ರಹಿಸಿ ತಾಲ್ಲೂಕು ವಕೀಲರ ಸಂಘದಿಂದ ಸೋಮವಾರ ನ್ಯಾಯಾಲಯ ಮುಂಭಾಗ ಪ್ರತಿಭಟನೆ ನಡೆಸಿ, ಉಪವಿಭಾಗಾಧಿಕಾರಿ ಗೊಟೋರು ಶಿವಪ್ಪ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.</p>.<p>ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಪಿ.ಸಿ.ಕೃಷ್ಣಾ ರೆಡ್ಡಿ ಮಾತನಾಡಿ ಪಾವಗಡ, ಕೊರಟಗೆರೆ , ಶಿರಾ ಮತ್ತು ಮಧುಗಿರಿ ತಾಲ್ಲೂಕಿನಲ್ಲಿ ಯಾವುದೇ ನೀರಾವರಿ ವ್ಯವಸ್ಥೆ ಇಲ್ಲದೆ ಮಳೆಯನ್ನೇ ನಂಬಿಕೊಂಡು ರೈತರು ಹಾಗೂ ಜನರು ಜೀವನ ನಡೆಸುತ್ತಿದ್ದಾರೆ. ಈ ನಾಲ್ಕು ತಾಲ್ಲೂಕುಗಳು ಬರಗಾಲ ಪೀಡಿತ ಪ್ರದೇಶವಾಗಿವೆ. ಕುಡಿಯುವ ನೀರಿಗೂ ಜನರು ಪರದಾಡುತ್ತಾರೆ.</p>.<p>ಜಿಲ್ಲೆಯ ಬರಪೀಡಿತ ತಾಲ್ಲೂಕುಗಳಿಗೆ ಈಗಾಗಲೇ ನಿಗದಿಪಡಿಸಿರುವ ಹೇಮಾವತಿ ನದಿ ನೀರು ಇತರ ತಾಲ್ಲೂಕುಗಳಿಗೆ ಹರಿಯಲು ಬಿಡುವುದಿಲ್ಲ. ‘ನಮ್ಮ ಜಿಲ್ಲೆ ನೀರು, ನಮ್ಮ ಹಕ್ಕು’ ಇದನ್ನು ಕಸಿದುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ ಎಂದು ತಿಳಿಸಿದರು.</p>.<p>ವಕೀಲರಾದ ಪಂಚಾಕ್ಷರಯ್ಯ, ನಾಗರಾಜು, ತಿಮ್ಮರಾಜು, ರಂಗನಾಥ್, ಆಶೋಕ್, ಎಚ್.ವಿ.ಮಂಜುನಾಥ್,ನಾಗಭೂಷಣ್,ಆನಂದ್,ಪುಷ್ವಲತಾ,ಅನ್ನಪೂರ್ಣ,ಮಹೇಶ್,ದೇವರಾಜು,ಜಗದೀಶ್, ಆಶ್ವಥ್ ನಾರಾಯಣ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಧುಗಿರಿ:</strong> ಹೇಮಾವತಿ ಲಿಂಕ್ ಕೆನಾಲ್ನಿಂದ ತುಮಕೂರು ಜಿಲ್ಲೆ ಜನರಿಗೆ ಸಾಕಷ್ಟು ಅನ್ಯಾಯವಾಗಲಿದೆ. ತಕ್ಷಣ ಈ ಕಾಮಗಾರಿ ನಿಲ್ಲಿಸಬೇಕೆಂದು ಆಗ್ರಹಿಸಿ ತಾಲ್ಲೂಕು ವಕೀಲರ ಸಂಘದಿಂದ ಸೋಮವಾರ ನ್ಯಾಯಾಲಯ ಮುಂಭಾಗ ಪ್ರತಿಭಟನೆ ನಡೆಸಿ, ಉಪವಿಭಾಗಾಧಿಕಾರಿ ಗೊಟೋರು ಶಿವಪ್ಪ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.</p>.<p>ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಪಿ.ಸಿ.ಕೃಷ್ಣಾ ರೆಡ್ಡಿ ಮಾತನಾಡಿ ಪಾವಗಡ, ಕೊರಟಗೆರೆ , ಶಿರಾ ಮತ್ತು ಮಧುಗಿರಿ ತಾಲ್ಲೂಕಿನಲ್ಲಿ ಯಾವುದೇ ನೀರಾವರಿ ವ್ಯವಸ್ಥೆ ಇಲ್ಲದೆ ಮಳೆಯನ್ನೇ ನಂಬಿಕೊಂಡು ರೈತರು ಹಾಗೂ ಜನರು ಜೀವನ ನಡೆಸುತ್ತಿದ್ದಾರೆ. ಈ ನಾಲ್ಕು ತಾಲ್ಲೂಕುಗಳು ಬರಗಾಲ ಪೀಡಿತ ಪ್ರದೇಶವಾಗಿವೆ. ಕುಡಿಯುವ ನೀರಿಗೂ ಜನರು ಪರದಾಡುತ್ತಾರೆ.</p>.<p>ಜಿಲ್ಲೆಯ ಬರಪೀಡಿತ ತಾಲ್ಲೂಕುಗಳಿಗೆ ಈಗಾಗಲೇ ನಿಗದಿಪಡಿಸಿರುವ ಹೇಮಾವತಿ ನದಿ ನೀರು ಇತರ ತಾಲ್ಲೂಕುಗಳಿಗೆ ಹರಿಯಲು ಬಿಡುವುದಿಲ್ಲ. ‘ನಮ್ಮ ಜಿಲ್ಲೆ ನೀರು, ನಮ್ಮ ಹಕ್ಕು’ ಇದನ್ನು ಕಸಿದುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ ಎಂದು ತಿಳಿಸಿದರು.</p>.<p>ವಕೀಲರಾದ ಪಂಚಾಕ್ಷರಯ್ಯ, ನಾಗರಾಜು, ತಿಮ್ಮರಾಜು, ರಂಗನಾಥ್, ಆಶೋಕ್, ಎಚ್.ವಿ.ಮಂಜುನಾಥ್,ನಾಗಭೂಷಣ್,ಆನಂದ್,ಪುಷ್ವಲತಾ,ಅನ್ನಪೂರ್ಣ,ಮಹೇಶ್,ದೇವರಾಜು,ಜಗದೀಶ್, ಆಶ್ವಥ್ ನಾರಾಯಣ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>