<p><strong>ಮಧುಗಿರಿ</strong>: ಪಟ್ಟಣದ ಗೊಬ್ಬರ ಅಂಗಡಿ ಮುಂಭಾಗ ಮಂಗಳವಾರ ತಾಲ್ಲೂಕಿನ ರೈತರು ಮುಗಿಬಿದ್ದು ಯೂರಿಯಾ ಖರೀದಿಸಿದರು.</p>.<p>ಪಟ್ಟಣದ ಗೊಬ್ಬರದ ಅಂಗಡಿಗಳಿಗೆ ಯೂರಿಯಾ ಪೂರೈಕೆಯಾಗಿರುವ ವಿಷಯ ತಿಳಿದ ರೈತರು ತಮ್ಮ ಆಧಾರ್ ಕಾರ್ಡ್ಗಳನ್ನು ಕೈಯಲ್ಲಿ ಹಿಡಿದು ಸಾಲಿನಲ್ಲಿ ನಿಂತು ಖರೀದಿಗೆ ಮುಂದಾದರು.</p>.<p>ಮಳೆ ಬಂದಾಗ ಯೂರಿಯಾಗೆ ಬೇಡಿಕೆ ಹೆಚ್ಚಾಗಿದ್ದು, ರೈತರಿಗೆ ಬೇಕಾಗುವಷ್ಟು ಗೊಬ್ಬರ ಕೊಡಬೇಕು. ಆದರೆ ಗೊಬ್ಬರದ ಅಂಗಡಿಗಳಲ್ಲಿ ಯೂರಿಯಾ ಗೊಬ್ಬರವೇ ಸಿಗುತ್ತಿಲ್ಲ. ಇದರಿಂದಾಗಿ ರೈತರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಈ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ರೈತ ಕೃಷ್ಣಪ್ಪ ಆಗ್ರಹಿಸಿದರು.</p>.<p>ರೈತರಿಗೆ ಅಗತ್ಯವಿರುವ ಬೀಜ ಮತ್ತು ಯೂರಿಯಾ ಗೊಬ್ಬರಕ್ಕೆ ಸಾಕಷ್ಟು ಬೇಡಿಕೆಯಿದ್ದರೂ, ಸರ್ಕಾರ ಪೂರೈಸದೇ ನಿರ್ಲಕ್ಷ್ಯ ವಹಿಸಿರುವುದರಿಂದ ಈ ರೀತಿಯ ಸಮಸ್ಯೆ ಎದುರಾಗಿದೆ. ತಕ್ಷಣ ಸರ್ಕಾರವೇ ಈ ಸಮಸ್ಯೆ ತಿಳಿಗೊಳಿಸಬೇಕು ಎಂದು ರೈತ ರಂಗನಾಥಪ್ಪ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಧುಗಿರಿ</strong>: ಪಟ್ಟಣದ ಗೊಬ್ಬರ ಅಂಗಡಿ ಮುಂಭಾಗ ಮಂಗಳವಾರ ತಾಲ್ಲೂಕಿನ ರೈತರು ಮುಗಿಬಿದ್ದು ಯೂರಿಯಾ ಖರೀದಿಸಿದರು.</p>.<p>ಪಟ್ಟಣದ ಗೊಬ್ಬರದ ಅಂಗಡಿಗಳಿಗೆ ಯೂರಿಯಾ ಪೂರೈಕೆಯಾಗಿರುವ ವಿಷಯ ತಿಳಿದ ರೈತರು ತಮ್ಮ ಆಧಾರ್ ಕಾರ್ಡ್ಗಳನ್ನು ಕೈಯಲ್ಲಿ ಹಿಡಿದು ಸಾಲಿನಲ್ಲಿ ನಿಂತು ಖರೀದಿಗೆ ಮುಂದಾದರು.</p>.<p>ಮಳೆ ಬಂದಾಗ ಯೂರಿಯಾಗೆ ಬೇಡಿಕೆ ಹೆಚ್ಚಾಗಿದ್ದು, ರೈತರಿಗೆ ಬೇಕಾಗುವಷ್ಟು ಗೊಬ್ಬರ ಕೊಡಬೇಕು. ಆದರೆ ಗೊಬ್ಬರದ ಅಂಗಡಿಗಳಲ್ಲಿ ಯೂರಿಯಾ ಗೊಬ್ಬರವೇ ಸಿಗುತ್ತಿಲ್ಲ. ಇದರಿಂದಾಗಿ ರೈತರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಈ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ರೈತ ಕೃಷ್ಣಪ್ಪ ಆಗ್ರಹಿಸಿದರು.</p>.<p>ರೈತರಿಗೆ ಅಗತ್ಯವಿರುವ ಬೀಜ ಮತ್ತು ಯೂರಿಯಾ ಗೊಬ್ಬರಕ್ಕೆ ಸಾಕಷ್ಟು ಬೇಡಿಕೆಯಿದ್ದರೂ, ಸರ್ಕಾರ ಪೂರೈಸದೇ ನಿರ್ಲಕ್ಷ್ಯ ವಹಿಸಿರುವುದರಿಂದ ಈ ರೀತಿಯ ಸಮಸ್ಯೆ ಎದುರಾಗಿದೆ. ತಕ್ಷಣ ಸರ್ಕಾರವೇ ಈ ಸಮಸ್ಯೆ ತಿಳಿಗೊಳಿಸಬೇಕು ಎಂದು ರೈತ ರಂಗನಾಥಪ್ಪ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>