<p><strong>ಮಧುಗಿರಿ</strong>: ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಗೋಮಾಳವನ್ನು ಅಕ್ರಮವಾಗಿ ಖಾತೆ ಮಾಡಿಸಿಕೊಳ್ಳಲಾಗಿದೆ ಎಂದು ಆರೋಪಿಸಿ ಅಡವಿನಾಗೇನಹಳ್ಳಿ ಗ್ರಾಮಸ್ಥರು ಪಟ್ಟಣದ ತಾಲ್ಲೂಕು ಕಚೇರಿ ಅವರಣದಿಂದ ಉಪವಿಭಾಗಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ನಡೆಸಿ ನಂತರ ಉಪವಿಭಾಗಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.</p>.<p>ಕೊಡಿಗೇನಹಳ್ಳಿ ಹೋಬಳಿ ಅಡವಿನಾಗೇನಹಳ್ಳಿಯಲ್ಲಿ ನಾಲ್ಕು ಎಕರೆ 28 ಗುಂಟೆ ಜಮೀನಿನ ಖಾತೆ ಮಾಡುವುದರ ಬದಲಿಗೆ ಗೋಮಾಳದ ಜಮೀನು ಸೇರಿ 18 ಎಕರೆ 27 ಗುಂಟೆ ಭೂಮಿಯನ್ನು ಖಾತೆ ಮಾಡಿಸಿಕೊಳ್ಳಲಾಗಿದೆ ಎಂದು ಪ್ರತಿಭಟನಕಾರರು ದೂರಿದರು.</p>.<p>‘ಗ್ರಾಮದಲ್ಲಿ 200 ಮನೆಗಳಿದ್ದು ಎಲ್ಲಾ ಕುಟುಂಬಗಳು ಒಣಬೇಸಾಯ ಮತ್ತು ಹೈನುಗಾರಿಕೆ ಅವಲಂಬಿಸಿದ್ದಾರೆ. ನೂರಾರು ವರ್ಷಗಳಿಂದ ಎಮ್ಮೆ, ಕುರಿ, ಆಡು ಮೇಯಿಸುತ್ತಿದ್ದ ಜಾಗಕ್ಕೆ ಒಮ್ಮೆಲೆ ಬೇಲಿ ಹಾಕಲು ಹೊರಟಿದ್ದಾರೆ. ಈ ಬಗ್ಗೆ ಹಲವು ಬಾರಿ ಅಧಿಕಾರಿಗಳಿಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಅನಿವಾರ್ಯವಾಗಿ ಹೋರಾಟದ ಹಾದಿ ತುಳಿಯಬೇಕಾಗಿದೆ’ ಎಂದು ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಹತ್ತಾರು ಎಕರೆ ಜಮೀನು ಹೊಂದಿರುವವರೇ ಗೋಮಾಳವನ್ನು ಅಧಿಕಾರಿಗಳ ಸಹಾಯದಿಂದ ತಮ್ಮ ಹೆಸರಿಗೆ ಮಾಡಿಸಿಕೊಂಡಿರುವುದು ಊರಿನ ಬಡ ಜನರಿಗೆ ಮಾಡಿರುವ ದೊಡ್ಡ ಅನ್ಯಾಯ’ ಎನ್ನುತ್ತಾರೆ ಸ್ಥಳೀಯರಾದ ಲಕ್ಷ್ಮೀಪತಿ.</p>.<p>ಸ್ಥಳೀಯರಾದ ಎ.ಪಿ.ಗಂಗಾಧರ್, ಎ.ಟಿ.ನರಸಿಂಹಮೂರ್ತಿ, ಡಿ.ಕೆ.ಶ್ರೀನಿವಾಸ್, ರಮೇಶ್, ಗಂಗಾಧರ್, ಎಸ್.ಕೆ.ರಂಗನಾಥ್, ಲಕ್ಷ್ಮೀಪತಿ, ಆನಂದ್, ಎನ್.ಎಲ್.ರಾಮಾನಂದ, ರಾಜಕುಮಾರ, ಸಾವಿತ್ರಮ್ಮ, ಹನುಮಕ್ಕ, ಗೀತಾ, ರಾಧಮ್ಮ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-17-1246539225</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಧುಗಿರಿ</strong>: ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಗೋಮಾಳವನ್ನು ಅಕ್ರಮವಾಗಿ ಖಾತೆ ಮಾಡಿಸಿಕೊಳ್ಳಲಾಗಿದೆ ಎಂದು ಆರೋಪಿಸಿ ಅಡವಿನಾಗೇನಹಳ್ಳಿ ಗ್ರಾಮಸ್ಥರು ಪಟ್ಟಣದ ತಾಲ್ಲೂಕು ಕಚೇರಿ ಅವರಣದಿಂದ ಉಪವಿಭಾಗಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ನಡೆಸಿ ನಂತರ ಉಪವಿಭಾಗಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.</p>.<p>ಕೊಡಿಗೇನಹಳ್ಳಿ ಹೋಬಳಿ ಅಡವಿನಾಗೇನಹಳ್ಳಿಯಲ್ಲಿ ನಾಲ್ಕು ಎಕರೆ 28 ಗುಂಟೆ ಜಮೀನಿನ ಖಾತೆ ಮಾಡುವುದರ ಬದಲಿಗೆ ಗೋಮಾಳದ ಜಮೀನು ಸೇರಿ 18 ಎಕರೆ 27 ಗುಂಟೆ ಭೂಮಿಯನ್ನು ಖಾತೆ ಮಾಡಿಸಿಕೊಳ್ಳಲಾಗಿದೆ ಎಂದು ಪ್ರತಿಭಟನಕಾರರು ದೂರಿದರು.</p>.<p>‘ಗ್ರಾಮದಲ್ಲಿ 200 ಮನೆಗಳಿದ್ದು ಎಲ್ಲಾ ಕುಟುಂಬಗಳು ಒಣಬೇಸಾಯ ಮತ್ತು ಹೈನುಗಾರಿಕೆ ಅವಲಂಬಿಸಿದ್ದಾರೆ. ನೂರಾರು ವರ್ಷಗಳಿಂದ ಎಮ್ಮೆ, ಕುರಿ, ಆಡು ಮೇಯಿಸುತ್ತಿದ್ದ ಜಾಗಕ್ಕೆ ಒಮ್ಮೆಲೆ ಬೇಲಿ ಹಾಕಲು ಹೊರಟಿದ್ದಾರೆ. ಈ ಬಗ್ಗೆ ಹಲವು ಬಾರಿ ಅಧಿಕಾರಿಗಳಿಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಅನಿವಾರ್ಯವಾಗಿ ಹೋರಾಟದ ಹಾದಿ ತುಳಿಯಬೇಕಾಗಿದೆ’ ಎಂದು ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಹತ್ತಾರು ಎಕರೆ ಜಮೀನು ಹೊಂದಿರುವವರೇ ಗೋಮಾಳವನ್ನು ಅಧಿಕಾರಿಗಳ ಸಹಾಯದಿಂದ ತಮ್ಮ ಹೆಸರಿಗೆ ಮಾಡಿಸಿಕೊಂಡಿರುವುದು ಊರಿನ ಬಡ ಜನರಿಗೆ ಮಾಡಿರುವ ದೊಡ್ಡ ಅನ್ಯಾಯ’ ಎನ್ನುತ್ತಾರೆ ಸ್ಥಳೀಯರಾದ ಲಕ್ಷ್ಮೀಪತಿ.</p>.<p>ಸ್ಥಳೀಯರಾದ ಎ.ಪಿ.ಗಂಗಾಧರ್, ಎ.ಟಿ.ನರಸಿಂಹಮೂರ್ತಿ, ಡಿ.ಕೆ.ಶ್ರೀನಿವಾಸ್, ರಮೇಶ್, ಗಂಗಾಧರ್, ಎಸ್.ಕೆ.ರಂಗನಾಥ್, ಲಕ್ಷ್ಮೀಪತಿ, ಆನಂದ್, ಎನ್.ಎಲ್.ರಾಮಾನಂದ, ರಾಜಕುಮಾರ, ಸಾವಿತ್ರಮ್ಮ, ಹನುಮಕ್ಕ, ಗೀತಾ, ರಾಧಮ್ಮ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-17-1246539225</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>