ಮಧುಗಿರಿ: ತಾಲ್ಲೂಕಿನ ನಾಗಲಾಪುರ ಗ್ರಾಮದ ಸಮೀಪದಲ್ಲಿ ಹಳ್ಳ ದಾಟುತ್ತಿದ್ದಾಗ ನೀರಿನಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಮೃತ ದೇಹ ಶನಿವಾರ ಬೆಳಿಗ್ಗೆ ಪತ್ತೆಯಾಗಿದೆ.
ತಾಲ್ಲೂಕಿನ ಹನುಮಂತಪುರ ಗ್ರಾಮದ ನಿವಾಸಿ ದ್ವಾರಪ್ಪ (60) ಬುಧವಾರ ರಾತ್ರಿ ಹಳ್ಳ ದಾಟುವಾಗ ನೀರಿನಲ್ಲಿ ಕೊಚ್ಚಿ ಹೋಗಿದ್ದರು. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದರು. ಮೂರು ದಿನಗಳ ನಂತರ ಶವ ಪತ್ತೆಯಾಗಿದೆ.
ಶನಿವಾರ ನಾಗಲಾಪುರ ಗ್ರಾಮದ ಹಳ್ಳದಿಂದ ಸುಮಾರು ಅರ್ಧ ಕಿ.ಮೀ ದೂರದಲ್ಲಿ ದ್ವಾರಪ್ಪ ಮೃತದೇಹ ಪತ್ತೆಯಾಗಿದೆ. ಅಗ್ನಿಶಾಮಕ ಸಿಬ್ಬಂದಿ ನಡೆಸಿದ ಕಾರ್ಯಾಚರಣೆ ಯಶಸ್ವಿಯಾಗಿದೆ. ಮೃತ ಕುಟುಂಬಕ್ಕೆ ಪರಿಹಾರ ನೀಡಲಾಗುವುದು ಎಂದು ತಹಶೀಲ್ದಾರ್ ಸುರೇಶ್ ಆಚಾರ್ ತಿಳಿಸಿದರು.
ಮಧುಗುರಿ ತಾಲ್ಲೂಕಿನ ನಾಗಲಾಪುರ ಗ್ರಾಮದ ಬಳಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಮೃತ ದೇಹವನ್ನು ಅಗ್ನಿ ಶಾಮಕ ದಳದ ಸಿಬ್ಬಂದಿ ಹೊರ ತೆಗೆದರು