ಪಟ್ಟಣದ ಲಾಲ್ ಬಹಾದ್ದೂರ್ ಶಾಸ್ತ್ರಿ ಮೈದಾನದಲ್ಲಿ ನಡೆಯುತ್ತಿರುವ ಸಂತೆಯನ್ನು ಇಲ್ಲಿಯೇ ಮುಂದುವರೆಸಿದರೆ ಎಲ್ಲರಿಗೂ ಅನುಕೂಲ. ಈ ಬಗ್ಗೆ ಈಗಾಗಲೇ ಸಚಿವರ ಗಮನಕ್ಕೆ ತರಲಾಗಿದೆ.
-ಕೆ.ಎಂ.ಗುರುರಾಜ್ ಬೀದಿ ಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ
ಸದ್ಯ ಸಂತೆ ಪಟ್ಟಣದ ಹೃದಯ ಭಾಗದಲ್ಲಿ ಇರುವುದರಿಂದ ಎಲ್ಲರಿಗೂ ಅನುಕೂಲ. ಎಪಿಎಂಸಿ ಆವರಣಕ್ಕೆ ಸಂತೆ ಸ್ಥಳಾಂತರಿಸಿದರೆ ಆಟೊ ಮತ್ತು ವಾಹನಗಳನ್ನೇ ಅವಲಂಬಿಸಬೇಕಾಗುತ್ತದೆ.
-ಅರುಣ್, ವ್ಯಾಪಾರಿ
ಲಾಲ್ ಬಹಾದ್ದೂರ್ ಶಾಸ್ತ್ರಿ ಮೈದಾನದಲ್ಲಿ ನಡೆಯುತ್ತಿರುವ ಸಂತೆಯಿಂದ ಪಟ್ಟಣದಲ್ಲಿ ಸಾಕಷ್ಟು ಸಂಚಾರ ದಟ್ಟಣೆಯಾಗುತ್ತಿದೆ. ಈ ಸಂತೆಯನ್ನು ಎಪಿಎಂಸಿ ಆವರಣಕ್ಕೆ ಸ್ಥಳಾಂತರಿಸಿದರೆ ಪಟ್ಟಣವು ಅಭಿವೃದ್ಧಿಯಾಗುತ್ತದೆ.