<p><strong>ಮಧುಗಿರಿ: </strong>ಇಲ್ಲಿನ ಪುರಸಭೆಗೆ ಚುನಾವಣೆ ನಡೆದು, ಎರಡು ವರ್ಷದ ನಂತರ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟವಾಗಿದೆ. ಅಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ನಿಗದಿಯಾಗಿದೆ.</p>.<p>23 ಸದಸ್ಯ ಬಲದ ಪುರಸಭೆಯಲ್ಲಿ 13 ಕಾಂಗ್ರೆಸ್, 9 ಜೆಡಿಎಸ್ ಹಾಗೂ ಒಬ್ಬರು ಪಕ್ಷೇತರ ಸದಸ್ಯರಿದ್ದಾರೆ. ಕಾಂಗ್ರೆಸ್ಗೆ ಸ್ಪಷ್ಟ ಬಹುಮತವಿದ್ದರೂ, ಪರಿಶಿಷ್ಟ ಪಂಗಡದ ಯಾವುದೇ ಸದಸ್ಯರಿಲ್ಲ. ಜೆಡಿಎಸ್ನಿಂದ ಆಯ್ಕೆಯಾಗಿರುವ ಸದಸ್ಯ ತಿಮ್ಮರಾಜು ಅವರು ಒಂದು ವರ್ಷದಿಂದ ಕಾಂಗ್ರೆಸ್ನಲ್ಲಿ ಗುರುತಿಸಿಕೊಂಡು ಸಭೆ ಹಾಗೂ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಹಾಗಾಗಿ ತಿಮ್ಮರಾಜು ಅವರಿಗೆ ಅಧ್ಯಕ್ಷ ಸ್ಥಾನ ದೊರಕುವುದು ಬಹುತೇಕ ಖಚಿತವಾಗಿದೆ. ಜೆಡಿಎಸ್ನಿಂದಲೇ ಆಯ್ಕೆಯಾಗಿರುವ ಪರಿಶಿಷ್ಟ ಪಂಗಡದ ಮತ್ತೊಬ್ಬ ಸದಸ್ಯೆ ಪಾರ್ವತಮ್ಮ ಅವರು ತಿಮ್ಮರಾಜು ಸಂಬಂಧಿಯಾಗಿರುವುದರಿಂದ ಅಧ್ಯಕ್ಷರ ಹಾದಿ ಮತ್ತಷ್ಟು ಸುಗಮವಾಗಿದೆ ಎನ್ನಲಾಗುತ್ತಿದೆ.</p>.<p>ಪರಿಶಿಷ್ಟ ಪಂಗಡಕ್ಕೆ ಸೇರಿದ ಇಬ್ಬರು ಸದಸ್ಯರು ಜೆಡಿಎಸ್ನಿಂದ ಗೆದ್ದಿರುವುದರಿಂದ ಜೆಡಿಎಸ್ ಸದಸ್ಯರೇ ಅಧ್ಯಕ್ಷರಾಗುವುದು ಖಚಿತ. ಶಾಸಕ ಎಂ.ವಿ.ವೀರಭದ್ರಯ್ಯ ಕಾದು ನೋಡುವ ತಂತ್ರ ಅನುಸರಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಧುಗಿರಿ: </strong>ಇಲ್ಲಿನ ಪುರಸಭೆಗೆ ಚುನಾವಣೆ ನಡೆದು, ಎರಡು ವರ್ಷದ ನಂತರ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟವಾಗಿದೆ. ಅಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ನಿಗದಿಯಾಗಿದೆ.</p>.<p>23 ಸದಸ್ಯ ಬಲದ ಪುರಸಭೆಯಲ್ಲಿ 13 ಕಾಂಗ್ರೆಸ್, 9 ಜೆಡಿಎಸ್ ಹಾಗೂ ಒಬ್ಬರು ಪಕ್ಷೇತರ ಸದಸ್ಯರಿದ್ದಾರೆ. ಕಾಂಗ್ರೆಸ್ಗೆ ಸ್ಪಷ್ಟ ಬಹುಮತವಿದ್ದರೂ, ಪರಿಶಿಷ್ಟ ಪಂಗಡದ ಯಾವುದೇ ಸದಸ್ಯರಿಲ್ಲ. ಜೆಡಿಎಸ್ನಿಂದ ಆಯ್ಕೆಯಾಗಿರುವ ಸದಸ್ಯ ತಿಮ್ಮರಾಜು ಅವರು ಒಂದು ವರ್ಷದಿಂದ ಕಾಂಗ್ರೆಸ್ನಲ್ಲಿ ಗುರುತಿಸಿಕೊಂಡು ಸಭೆ ಹಾಗೂ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಹಾಗಾಗಿ ತಿಮ್ಮರಾಜು ಅವರಿಗೆ ಅಧ್ಯಕ್ಷ ಸ್ಥಾನ ದೊರಕುವುದು ಬಹುತೇಕ ಖಚಿತವಾಗಿದೆ. ಜೆಡಿಎಸ್ನಿಂದಲೇ ಆಯ್ಕೆಯಾಗಿರುವ ಪರಿಶಿಷ್ಟ ಪಂಗಡದ ಮತ್ತೊಬ್ಬ ಸದಸ್ಯೆ ಪಾರ್ವತಮ್ಮ ಅವರು ತಿಮ್ಮರಾಜು ಸಂಬಂಧಿಯಾಗಿರುವುದರಿಂದ ಅಧ್ಯಕ್ಷರ ಹಾದಿ ಮತ್ತಷ್ಟು ಸುಗಮವಾಗಿದೆ ಎನ್ನಲಾಗುತ್ತಿದೆ.</p>.<p>ಪರಿಶಿಷ್ಟ ಪಂಗಡಕ್ಕೆ ಸೇರಿದ ಇಬ್ಬರು ಸದಸ್ಯರು ಜೆಡಿಎಸ್ನಿಂದ ಗೆದ್ದಿರುವುದರಿಂದ ಜೆಡಿಎಸ್ ಸದಸ್ಯರೇ ಅಧ್ಯಕ್ಷರಾಗುವುದು ಖಚಿತ. ಶಾಸಕ ಎಂ.ವಿ.ವೀರಭದ್ರಯ್ಯ ಕಾದು ನೋಡುವ ತಂತ್ರ ಅನುಸರಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>