<p>ಮಧುಗಿರಿ: ಒಳ ಮೀಸಲಾತಿಯನ್ನು ಪೂರ್ಣ ಪ್ರಮಾಣದಲ್ಲಿ ಜಾರಿಗೊಳಿಸುವಂತೆ ಒತ್ತಾಯಿಸಿ ತಾಲ್ಲೂಕು ದಲಿತ ಪರ ಸಂಘಟನೆ ಪದಾಧಿಕಾರಿಗಳು ಭಾನುವಾರ ನಡೆದ ಬಾಬು ಜಗಜೀವನ ರಾಂ ಜಯಂತಿಯಲ್ಲಿ ಪಾಲ್ಗೊಳ್ಳದೆ ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ ಅವರಿಗೆ ಮನವಿ ಪತ್ರ ಸಲ್ಲಿಸಿದರು.</p>.<p>ಒಳ ಮೀಸಲಾತಿ ವಿಚಾರವಾಗಿ ರಾಜ್ಯ ಸರ್ಕಾರ ಸ್ಪಷ್ಟ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು. ಕಾನೂನು ಬದ್ಧವಾಗಿ ಸಂವಿಧಾನದ ಅಡಿಯಲ್ಲಿ ಪೂರ್ಣ ಪ್ರಮಾಣದ ಒಳ ಮೀಸಲಾತಿ ಜಾರಿ ಆಗಬೇಕು ಎಂದು ಒತ್ತಾಯಿಸಿದರು.</p>.<p>ಒಳ ಮೀಸಲಾತಿಗಾಗಿ ಮೂವತ್ತು ವರ್ಷಗಳಿಂದ ಅನೇಕ ಹೋರಾಟಗಳನ್ನು ಮಾಡಿದ್ದರೂ ಸರ್ಕಾರಗಳು ಬೇಡಿಕೆಯನ್ನು ನಿರ್ಲಕ್ಷ್ಯ ಮಾಡುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ದೊಡ್ಡೇರಿ ಕಣಿಮಯ್ಯ, ಜೀವಿಕ ಮಂಜುನಾಥ್, ತೊಂಡೋಟಿ ರಾಮಾಂಜಿನಪ್ಪ, ಎಂ.ವೈ ಶಿವಕುಮಾರ್, ದೊಡ್ಡಹೊಸಹಳ್ಳಿ ನರಸಿಂಹಮೂರ್ತಿ, ಎಸ್.ಕೆ.ರಂಗನಾಥ್, ಚಿಕ್ಕಮ್ಮ, ಸಂಜೀವಯ್ಯ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-17-1293270646</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಧುಗಿರಿ: ಒಳ ಮೀಸಲಾತಿಯನ್ನು ಪೂರ್ಣ ಪ್ರಮಾಣದಲ್ಲಿ ಜಾರಿಗೊಳಿಸುವಂತೆ ಒತ್ತಾಯಿಸಿ ತಾಲ್ಲೂಕು ದಲಿತ ಪರ ಸಂಘಟನೆ ಪದಾಧಿಕಾರಿಗಳು ಭಾನುವಾರ ನಡೆದ ಬಾಬು ಜಗಜೀವನ ರಾಂ ಜಯಂತಿಯಲ್ಲಿ ಪಾಲ್ಗೊಳ್ಳದೆ ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ ಅವರಿಗೆ ಮನವಿ ಪತ್ರ ಸಲ್ಲಿಸಿದರು.</p>.<p>ಒಳ ಮೀಸಲಾತಿ ವಿಚಾರವಾಗಿ ರಾಜ್ಯ ಸರ್ಕಾರ ಸ್ಪಷ್ಟ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು. ಕಾನೂನು ಬದ್ಧವಾಗಿ ಸಂವಿಧಾನದ ಅಡಿಯಲ್ಲಿ ಪೂರ್ಣ ಪ್ರಮಾಣದ ಒಳ ಮೀಸಲಾತಿ ಜಾರಿ ಆಗಬೇಕು ಎಂದು ಒತ್ತಾಯಿಸಿದರು.</p>.<p>ಒಳ ಮೀಸಲಾತಿಗಾಗಿ ಮೂವತ್ತು ವರ್ಷಗಳಿಂದ ಅನೇಕ ಹೋರಾಟಗಳನ್ನು ಮಾಡಿದ್ದರೂ ಸರ್ಕಾರಗಳು ಬೇಡಿಕೆಯನ್ನು ನಿರ್ಲಕ್ಷ್ಯ ಮಾಡುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ದೊಡ್ಡೇರಿ ಕಣಿಮಯ್ಯ, ಜೀವಿಕ ಮಂಜುನಾಥ್, ತೊಂಡೋಟಿ ರಾಮಾಂಜಿನಪ್ಪ, ಎಂ.ವೈ ಶಿವಕುಮಾರ್, ದೊಡ್ಡಹೊಸಹಳ್ಳಿ ನರಸಿಂಹಮೂರ್ತಿ, ಎಸ್.ಕೆ.ರಂಗನಾಥ್, ಚಿಕ್ಕಮ್ಮ, ಸಂಜೀವಯ್ಯ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-17-1293270646</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>