ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕುರುಬ ಸಮಾಜದ ಮುಖಂಡರು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಚಿವರಿಗೆ ಕೆಟ್ಟ ಹೆಸರು ತರಲು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಸಚಿವರ ಮಾತನ್ನು ತಿರುಚಿ, ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆ ಮಾಡಿದ್ದಾರೆ. ಸಚಿವರು ಮಾತನಾಡುವಾಗ ‘ಶ್ರೀಗಳು ಮಧ್ಯ ಮಾತನಾಡಬೇಡಿ ನಾನು ಮಾತನಾಡಿದ ನಂತರ ಮಾತನಾಡಿ’ ಎಂದು ಹೇಳಿದರೆ ಹೊರತು ಅವರಿಗೆ ಅವಮಾನ ಮಾಡಿಲ್ಲ ಎಂದರು.