ಕನಕದಾಸರು ಕುಲಕುಲವೆಂದು ಹೊಡೆದಾಡದಿರಿ ಎಂದು ಸಮಾಜಕ್ಕೆ ಮಾರ್ಗದರ್ಶನ ಮಾಡಿದ್ದರು, ಅದೇ ರೀತಿ ಬಸವಣ್ಣನವರ ಆದರ್ಶಗಳನ್ನು ಇಟ್ಟುಕೊಂಡಿರುವ ಶಿವಕುಮಾರಸ್ವಾಮಿಜಿಗಳು ಅನ್ನದಾಸೋಹ, ಅಕ್ಷರದಾಸೋಹಕ್ಕೆ ಒತ್ತು ನೀಡಿ ತಮ್ಮ ಮಠದಲ್ಲಿ 12ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಿದ್ದು, ಇದರಲ್ಲಿ 6ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿವಿಧ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಹುಳಿಯಾರಿನಲ್ಲಿ ಕನಕ ವೃತ್ತಕ್ಕೆ ಹೆಸರಿಡುವ ವಿಚಾರದಲ್ಲಿ ಎರಡು ಸಮಾಜ ತಲೆ ತಗ್ಗಿಸುವಂತೆ ಮಾಡಿದೆ, ಇದನ್ನೆ ಕೆಲವರು ಬಂಡವಾಳವನ್ನಾಗಿ ಉಪಯೋಗಿಸಿಕೊಂಡು ವಿಷಬೀಜ ಬಿತ್ತುತ್ತಿರುವುದು ಸರಿಯಲ್ಲ ಎಂದರು.