ಮಂಗಳವಾರ, 30 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜೀನಾಮೆಯಿಂದ ಹಿಂದೆ ಸರಿದ ಮಾಧುಸ್ವಾಮಿ

Last Updated 26 ಜನವರಿ 2021, 8:58 IST
ಅಕ್ಷರ ಗಾತ್ರ

ತುಮಕೂರು: ಪದೇಪದೇ ಖಾತೆ ಬದಲಾವಣೆಯಿಂದ ಅಸಮಾಧಾನಗೊಂಡು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದ ಸಚಿವ ಜೆ.ಸಿ.ಮಾಧುಸ್ವಾಮಿ ಈಗ ಆ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.

‘ಇಂತಹ ಸ್ಥಿತಿ ನೋಡಿ ಬೇಸರವಾಗಿತ್ತು. ಮನಸ್ಸಿಗೆ ನೋವಾಗಿತ್ತು. ನನ್ನ ಒಳ್ಳೆಯತನ, ನಿಷ್ಠೆಯನ್ನು ದುರುಪಯೋಗ ಮಾಡಿಕೊಳ್ಳಲಾಗಿತ್ತು. ಪದೇಪದೇ ಖಾತೆ ಬದಲಾವಣೆ ಮಾಡುವ ಮೂಲಕ ಸಮಾಜಕ್ಕೆ ಯಾವ ಸಂದೇಶ ಕೊಡುತ್ತಿದ್ದೀರಿ ಎಂದು ಪ್ರಶ್ನಿಸಿದ್ದೆ. ಈ ಎಲ್ಲಾ ಬೆಳವಣಿಗೆಗಳಿಂದ ರೆಬಲ್ ಆಗಿದ್ದು ನಿಜ. ಗಣರಾಜ್ಯೋತ್ಸವ ಧ್ವಜಾರೋಹಣದ ನಂತರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದು ಸತ್ಯ’ ಎಂದು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.

‘ನನಗೆ ದೊಡ್ಡ ಖಾತೆಗಳನ್ನು ಕೊಡಿ ಎಂದು ಕೇಳಿಲ್ಲ. ಯಾವುದಾದರೂ ಖಾತೆ ಕೊಡಿ. ಆದರೆ ಬದುಕಿನೊಂದಿಗೆ ಬೆಸೆಯುವ ಹಾಗೂ ಜನರೊಂದಿಗೆ ಇದ್ದುಕೊಂಡು ಕೆಲಸ ಮಾಡುವ ಖಾತೆ ನೀಡಿ ಎಂದಿದ್ದೆ. ಹಿಂದೆ ಸಣ್ಣ ನೀರಾವರಿ ಖಾತೆ ಯಾರಿಗೂ ಬೇಡವಾಗಿತ್ತು. ಯಾವುದಾದರೂ ಪ್ರಮುಖ ಖಾತೆ ಜತೆಗೆ ನೀಡುತ್ತಿದ್ದರು. ನಾನು ಸಚಿವನಾದ ನಂತರ ಅದರಲ್ಲಿ ಒಂದಷ್ಟು ಕೆಲಸ ಮಾಡಿ ತೋರಿಸಿದ್ದೇನೆ. ಕಾನೂನು ಹಾಗೂ ಸಂಸದೀಯ ವ್ಯವಹಾರ ಖಾತೆಯಿಂದಲೂ ಮುಕ್ತಿ ನೀಡಿದ್ದಾರೆ. ರಾಜೀನಾಮೆ ನೀಡದಂತೆ ಕೆಲ ಪ್ರಮುಖರು, ಮಠಾಧೀಶರು ಸಲಹೆ ಮಾಡಿದ್ದಾರೆ. ಮತ್ತೆ ಸಣ್ಣ ನೀರಾವರಿ ಖಾತೆ ನೀಡಿದ್ದು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿಲ್ಲ’ ಎಂದು ಸ್ಪಷ್ಟಪಡಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT