<p><strong>ಮಧುಗಿರಿ:</strong> ತಾಲ್ಲೂಕಿನ ಕಸಬಾ ವ್ಯಾಪ್ತಿಯ ಕಂಭತ್ತನಹಳ್ಳಿಗೆ ಸುಸಜ್ಜಿತ ರಸ್ತೆ ಹಾಗೂ ಚರಂಡಿ ಇಲ್ಲದೆ ಮಳೆ ನೀರು ರಸ್ತೆಯ ಮೇಲೆ ಹರಿದು ಜನರ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.</p><p>ಪಟ್ಟಣದ ಕೆ.ಆರ್. ಬಡಾವಣೆಗೆ ಹೊಂದಿಕೊಂಡಿರುವ ಕಂಭತ್ತನಹಳ್ಳಿಗೆ ತೆರಳಲು ಒಂದು ಕಿ.ಮೀ ಆಗುತ್ತದೆ. ಪಟ್ಟಣದ ತ್ಯಾಜ್ಯ ನೀರು ಹಾಗೂ ಮಳೆ ನೀರು ಈ ಚರಂಡಿಯ ಮೂಲಕ ಕಂಭತ್ತನಹಳ್ಳಿವರೆಗೆ ಹರಿಯುತ್ತದೆ. ಪಟ್ಟಣ ವ್ಯಾಪ್ತಿಯಿಂದ ಕೆಲವೇ ಮೀಟರ್ಗಳಷ್ಟು ಚರಂಡಿ ಇದ್ದು, ನಂತ ಗ್ರಾಮದವರೆಗೂ ಚರಂಡಿ ಇಲ್ಲದಿರುವುದರಿಂದ ರಸ್ತೆಯ ಮೇಲೆ ಹರಿಯುತ್ತಿದ್ದು, ರಸ್ತೆ ಹದಗೆಡುತ್ತಿದೆ.</p><p>ಮಳೆಗಾಲದಲ್ಲಿ ಮಳೆ ನೀರು ಸಂಪೂರ್ಣವಾಗಿ ರಸ್ತೆ ಮೇಲೆ ಹರಿಯುವುದರಿಂದ ರಸ್ತೆ ಯಾವುದು, ಚರಂಡಿ ಯಾವುದು ಎಂದು ತಿಳಿಯುತ್ತಿಲ್ಲ. ನಾಲ್ಕು ವರ್ಷಗಳಿಂದ ಈ ಸಮಸ್ಯೆ ಇದ್ದು, ಹಲವರು ಬಿದ್ದು ಗಾಯಗೊಂಡಿದ್ದಾರೆ.</p><p>ಪಟ್ಟಣದಲ್ಲಿ ಮಳೆ ಮತ್ತು ಚರಂಡಿ ನೀರು ಗ್ರಾಮದ ತಗ್ಗುಪ್ರದೇಶದ ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿಸುತ್ತಿದೆ. ಸಮಸ್ಯೆ ನಿವಾರಣೆಗೆ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಿಲ್ಲ ಎನ್ನುತ್ತಾರೆ ಸ್ಥಳೀಯ ನಿವಾಸಿಗಳು.</p><p>ಈ ಹಿಂದೆ ರಸ್ತೆ ನಿರ್ಮಾಣ ಮಾಡುವಾಗ ಚರಂಡಿ ನಿರ್ಮಾಣಕ್ಕೂ ಆದ್ಯತೆ ನೀಡಬೇಕಿತ್ತು. ಆದರೆ ಹಾಗೆ ಮಾಡದ ಕಾರಣ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದೆ.</p><p>ಈ ಭಾಗದ ರಸ್ತೆ ಸಂಪೂರ್ಣವಾಗಿ ಹಾಳಾಗಿರುವುದರಿಂದ ಕಂಭತ್ತನಹಳ್ಳಿ ಗ್ರಾಮಸ್ಥರು ಕಾರಮರಡಿ ಮತ್ತು ಲಿಂಗೇನಹಳ್ಳಿ ಮೂಲಕ ಮಧುಗಿರಿಗೆ ತೆರಳುವ ಅನಿವಾರ್ಯ ಸೃಷ್ಟಿಯಾಗಿದೆ. ಪಟ್ಟಣದ ಕೆ.ಆರ್.ಬಡಾವಣೆ ಮೂಲಕ ಕಂಭತ್ತನಹಳ್ಳಿ ರಸ್ತೆ ಅಭಿವೃದ್ಧಿಯಾದರೆ ಜನರಿಗೆ ಅನುಕೂಲವಾಗುತ್ತದೆ ಎಂದು ಗ್ರಾಮಸ್ಥರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಧುಗಿರಿ:</strong> ತಾಲ್ಲೂಕಿನ ಕಸಬಾ ವ್ಯಾಪ್ತಿಯ ಕಂಭತ್ತನಹಳ್ಳಿಗೆ ಸುಸಜ್ಜಿತ ರಸ್ತೆ ಹಾಗೂ ಚರಂಡಿ ಇಲ್ಲದೆ ಮಳೆ ನೀರು ರಸ್ತೆಯ ಮೇಲೆ ಹರಿದು ಜನರ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.</p><p>ಪಟ್ಟಣದ ಕೆ.ಆರ್. ಬಡಾವಣೆಗೆ ಹೊಂದಿಕೊಂಡಿರುವ ಕಂಭತ್ತನಹಳ್ಳಿಗೆ ತೆರಳಲು ಒಂದು ಕಿ.ಮೀ ಆಗುತ್ತದೆ. ಪಟ್ಟಣದ ತ್ಯಾಜ್ಯ ನೀರು ಹಾಗೂ ಮಳೆ ನೀರು ಈ ಚರಂಡಿಯ ಮೂಲಕ ಕಂಭತ್ತನಹಳ್ಳಿವರೆಗೆ ಹರಿಯುತ್ತದೆ. ಪಟ್ಟಣ ವ್ಯಾಪ್ತಿಯಿಂದ ಕೆಲವೇ ಮೀಟರ್ಗಳಷ್ಟು ಚರಂಡಿ ಇದ್ದು, ನಂತ ಗ್ರಾಮದವರೆಗೂ ಚರಂಡಿ ಇಲ್ಲದಿರುವುದರಿಂದ ರಸ್ತೆಯ ಮೇಲೆ ಹರಿಯುತ್ತಿದ್ದು, ರಸ್ತೆ ಹದಗೆಡುತ್ತಿದೆ.</p><p>ಮಳೆಗಾಲದಲ್ಲಿ ಮಳೆ ನೀರು ಸಂಪೂರ್ಣವಾಗಿ ರಸ್ತೆ ಮೇಲೆ ಹರಿಯುವುದರಿಂದ ರಸ್ತೆ ಯಾವುದು, ಚರಂಡಿ ಯಾವುದು ಎಂದು ತಿಳಿಯುತ್ತಿಲ್ಲ. ನಾಲ್ಕು ವರ್ಷಗಳಿಂದ ಈ ಸಮಸ್ಯೆ ಇದ್ದು, ಹಲವರು ಬಿದ್ದು ಗಾಯಗೊಂಡಿದ್ದಾರೆ.</p><p>ಪಟ್ಟಣದಲ್ಲಿ ಮಳೆ ಮತ್ತು ಚರಂಡಿ ನೀರು ಗ್ರಾಮದ ತಗ್ಗುಪ್ರದೇಶದ ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿಸುತ್ತಿದೆ. ಸಮಸ್ಯೆ ನಿವಾರಣೆಗೆ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಿಲ್ಲ ಎನ್ನುತ್ತಾರೆ ಸ್ಥಳೀಯ ನಿವಾಸಿಗಳು.</p><p>ಈ ಹಿಂದೆ ರಸ್ತೆ ನಿರ್ಮಾಣ ಮಾಡುವಾಗ ಚರಂಡಿ ನಿರ್ಮಾಣಕ್ಕೂ ಆದ್ಯತೆ ನೀಡಬೇಕಿತ್ತು. ಆದರೆ ಹಾಗೆ ಮಾಡದ ಕಾರಣ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದೆ.</p><p>ಈ ಭಾಗದ ರಸ್ತೆ ಸಂಪೂರ್ಣವಾಗಿ ಹಾಳಾಗಿರುವುದರಿಂದ ಕಂಭತ್ತನಹಳ್ಳಿ ಗ್ರಾಮಸ್ಥರು ಕಾರಮರಡಿ ಮತ್ತು ಲಿಂಗೇನಹಳ್ಳಿ ಮೂಲಕ ಮಧುಗಿರಿಗೆ ತೆರಳುವ ಅನಿವಾರ್ಯ ಸೃಷ್ಟಿಯಾಗಿದೆ. ಪಟ್ಟಣದ ಕೆ.ಆರ್.ಬಡಾವಣೆ ಮೂಲಕ ಕಂಭತ್ತನಹಳ್ಳಿ ರಸ್ತೆ ಅಭಿವೃದ್ಧಿಯಾದರೆ ಜನರಿಗೆ ಅನುಕೂಲವಾಗುತ್ತದೆ ಎಂದು ಗ್ರಾಮಸ್ಥರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>