<p><strong>ತಿಪಟೂರು:</strong> ಗಾಂಧೀಜಿ ಅವರ ಸತ್ಯ, ಅಹಿಂಸೆ, ಶಾಂತಿ ಮತ್ತು ಸ್ವಚ್ಛತೆ ಮೌಲ್ಯಗಳನ್ನು ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಸರಳತೆ ಮತ್ತು ಶಿಸ್ತನ್ನು ಅನುಸರಿಸಬೇಕು ಎಂದು ಶಾಸಕ ಕೆ.ಷಡಕ್ಷರಿ ಸಲಹೆ ನೀಡಿದರು.</p>.<p>ನಗರಸಭೆ ಕಾರ್ಯಾಲಯದಲ್ಲಿ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆಯಂದು ನಡೆದ ಕಾರ್ಯಕ್ರಮದಲ್ಲಿ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ಗಾಂಧೀಜಿ ಮಾರ್ಗದರ್ಶನದಿಂದಲೇ ಭಾರತ ಸ್ವಾತಂತ್ರ್ಯ ಪಡೆದುಕೊಂಡಿದೆ ಎಂದು ಸ್ಮರಿಸಿದರು.</p>.<p>ಗಾಂಧೀಜಿಯ ಸ್ವಚ್ಛತಾ ಸಂದೇಶ ಮತ್ತು ಅಹಿಂಸಾ ಸಿದ್ಧಾಂತವು ಇಂದಿಗೂ ಸಮಾಜಕ್ಕೆ ಮಾರ್ಗದರ್ಶನ ನೀಡುತ್ತದೆ ಎಂದರು.</p>.<p>ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಸರಳತೆ, ಶಿಸ್ತು ಮತ್ತು ತ್ಯಾಗದ ಪ್ರತೀಕ ಎಂದು ತಿಳಿಸಿದ ಶಾಸಕರು, ಅವರ 'ಜೈ ಜವಾನ್ - ಜೈ ಕಿಸಾನ್' ಘೋಷಣೆ ರಾಷ್ಟ್ರದಲ್ಲಿ ಇಂದಿಗೂ ಪ್ರಸ್ತುತವಾಗಿದೆ ಎಂದು ಹೇಳಿದರು.</p>.<p>ಇಬ್ಬರ ಮೌಲ್ಯಗಳನ್ನು ದೈನಂದಿನ ಜೀವನದಲ್ಲಿ ಅನುಸರಿಸಿದಾಗಲೇ ನಿಜವಾದ ಗೌರವ ಸಲ್ಲಿಸಿದಂತಾಗುತ್ತದೆ ಎಂದು ಹೇಳಿದರು.</p>.<p>ಈ ಸಂದರ್ಭದಲ್ಲಿ ಒಳಚರಂಡಿ ಸ್ವಚ್ಛಗೊಳಿಸುವ ಪೌರ ಕಾರ್ಮಿಕರಿಗೆ ‘ನಮಸ್ತೆ’ ಯೋಜನೆಯಡಿಯಲ್ಲಿ ಸುರಕ್ಷತಾ ಸಲಕರಣೆಗಳನ್ನು ವಿತರಿಸಲಾಯಿತು.</p>.<p>ನಗರಸಭೆ ಅಧ್ಯಕ್ಷೆ ಯಮುನಾಧರಣೇಶ್, ಸದಸ್ಯ ಮೆಡಿಕಲ್ ಶ್ರೀನಿವಾಸ್, ಆಯುಕ್ತ ವಿಶ್ವೇಶ್ವರ ಬದರಗಡೆ, ಆರೋಗ್ಯಾಧಿಕಾರಿ ಶ್ರೀನಿವಾಸ್ ಹಾಗೂ ಪೌರ ಕಾರ್ಮಿಕರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿಪಟೂರು:</strong> ಗಾಂಧೀಜಿ ಅವರ ಸತ್ಯ, ಅಹಿಂಸೆ, ಶಾಂತಿ ಮತ್ತು ಸ್ವಚ್ಛತೆ ಮೌಲ್ಯಗಳನ್ನು ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಸರಳತೆ ಮತ್ತು ಶಿಸ್ತನ್ನು ಅನುಸರಿಸಬೇಕು ಎಂದು ಶಾಸಕ ಕೆ.ಷಡಕ್ಷರಿ ಸಲಹೆ ನೀಡಿದರು.</p>.<p>ನಗರಸಭೆ ಕಾರ್ಯಾಲಯದಲ್ಲಿ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆಯಂದು ನಡೆದ ಕಾರ್ಯಕ್ರಮದಲ್ಲಿ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ಗಾಂಧೀಜಿ ಮಾರ್ಗದರ್ಶನದಿಂದಲೇ ಭಾರತ ಸ್ವಾತಂತ್ರ್ಯ ಪಡೆದುಕೊಂಡಿದೆ ಎಂದು ಸ್ಮರಿಸಿದರು.</p>.<p>ಗಾಂಧೀಜಿಯ ಸ್ವಚ್ಛತಾ ಸಂದೇಶ ಮತ್ತು ಅಹಿಂಸಾ ಸಿದ್ಧಾಂತವು ಇಂದಿಗೂ ಸಮಾಜಕ್ಕೆ ಮಾರ್ಗದರ್ಶನ ನೀಡುತ್ತದೆ ಎಂದರು.</p>.<p>ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಸರಳತೆ, ಶಿಸ್ತು ಮತ್ತು ತ್ಯಾಗದ ಪ್ರತೀಕ ಎಂದು ತಿಳಿಸಿದ ಶಾಸಕರು, ಅವರ 'ಜೈ ಜವಾನ್ - ಜೈ ಕಿಸಾನ್' ಘೋಷಣೆ ರಾಷ್ಟ್ರದಲ್ಲಿ ಇಂದಿಗೂ ಪ್ರಸ್ತುತವಾಗಿದೆ ಎಂದು ಹೇಳಿದರು.</p>.<p>ಇಬ್ಬರ ಮೌಲ್ಯಗಳನ್ನು ದೈನಂದಿನ ಜೀವನದಲ್ಲಿ ಅನುಸರಿಸಿದಾಗಲೇ ನಿಜವಾದ ಗೌರವ ಸಲ್ಲಿಸಿದಂತಾಗುತ್ತದೆ ಎಂದು ಹೇಳಿದರು.</p>.<p>ಈ ಸಂದರ್ಭದಲ್ಲಿ ಒಳಚರಂಡಿ ಸ್ವಚ್ಛಗೊಳಿಸುವ ಪೌರ ಕಾರ್ಮಿಕರಿಗೆ ‘ನಮಸ್ತೆ’ ಯೋಜನೆಯಡಿಯಲ್ಲಿ ಸುರಕ್ಷತಾ ಸಲಕರಣೆಗಳನ್ನು ವಿತರಿಸಲಾಯಿತು.</p>.<p>ನಗರಸಭೆ ಅಧ್ಯಕ್ಷೆ ಯಮುನಾಧರಣೇಶ್, ಸದಸ್ಯ ಮೆಡಿಕಲ್ ಶ್ರೀನಿವಾಸ್, ಆಯುಕ್ತ ವಿಶ್ವೇಶ್ವರ ಬದರಗಡೆ, ಆರೋಗ್ಯಾಧಿಕಾರಿ ಶ್ರೀನಿವಾಸ್ ಹಾಗೂ ಪೌರ ಕಾರ್ಮಿಕರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>