<p><strong>ತುಮಕೂರು: </strong>ಕಾರು ಖರೀದಿಸಲು ಶನಿವಾರ ನಗರದ ಷೊ ರೂಂ ಒಂದಕ್ಕೆ ಬಂದಿದ್ದ ಯುವಕನ ವೇಷ ಭೂಷಣ ನೋಡಿ ‘ನಿನ್ನಿಂದ ₹10 ಕೊಡೋಕೆ ಆಗಲ್ಲ. ನೀನು ಕಾರು ಖರೀದಿಸುತ್ತೀಯಾ?’ ಎಂದು ಅವಮಾನಿಸಿ, ಹೊರಕಳಿಸಿದ್ದ ಷೊ ರೂಂ ಸಿಬ್ಬಂದಿ ಯುವಕನ ಕ್ಷಮೆಯಾಚಿಸಿದ್ದಾರೆ.</p>.<p>ಹೆಬ್ಬೂರು ಹೋಬಳಿಯ ರಾಮನಪಾಳ್ಯದ ನಿವಾಸಿ ಕೆಂಪೇಗೌಡ ಕಾರು ಖರೀದಿಸಲು ನಗರದಲ್ಲಿರುವ ಷೊ ರೂಂಗೆ ಭೇಟಿ ನೀಡಿದ್ದರು. ಅವರ ಬಟ್ಟೆ ಮತ್ತು ಜತೆಗಿರುವ ಸ್ನೇಹಿತರನ್ನು ನೋಡಿ ಅಲ್ಲಿನ ಸಿಬ್ಬಂದಿ ’ನಿನಗೆ ₹10 ನೀಡುವ ಯೋಗ್ಯತೆಯಿಲ್ಲ’ ಎಂದು ಹೀಯಾಳಿಸಿದ್ದರು. ‘₹10 ಲಕ್ಷ ತಂದರೆ ಕಾರು ಕೊಡುತ್ತೇವೆ‘ ಎಂದು ಷೊ ರೂಂನಿಂದ ವಾಪಸ್ ಕಳುಹಿಸಿದ್ದರು. ಇದನ್ನೇ ಸವಾಲಾಗಿ ಸ್ವೀಕರಿಸಿದ ಯುವಕ, ಘಟನೆ ನಡೆದ ಅರ್ಧ ಗಂಟೆಯಲ್ಲಿ ₹10 ಲಕ್ಷ ಹಣ ಹೊಂದಿಸಿಕೊಂಡು ಹಿಂದಿರುಗಿದ್ದರು.</p>.<p>‘ದೊಡ್ಡ ಮೊತ್ತದ ನಗದು ಒಂದೇ ಬಾರಿ ಸ್ವೀಕರಿಸಲು ಸಾಧ್ಯವಿಲ್ಲ. ಈಗಾಗಲೇ ಆರ್ಟಿಒ ಕಚೇರಿ ಅವಧಿ ಮುಗಿದಿದ್ದರಿಂದ ಕಾರು ನೀಡಲು ಆಗುವುದಿಲ್ಲ’ ಎಂದು ಸಿಬ್ಬಂದಿ ತಿಳಿಸಿದ್ದರು. ಕೆಂಪೇಗೌಡ ತಮಗೆ ಅವಮಾನ ಮಾಡಿದ ಷೊ ರೂಂನಲ್ಲಿ ಕಾರು ಖರೀದಿಸದೇ ಸಿಬ್ಬಂದಿಯ ವರ್ತನೆಯನ್ನು ಖಂಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ಕಾರು ಖರೀದಿಸಲು ಶನಿವಾರ ನಗರದ ಷೊ ರೂಂ ಒಂದಕ್ಕೆ ಬಂದಿದ್ದ ಯುವಕನ ವೇಷ ಭೂಷಣ ನೋಡಿ ‘ನಿನ್ನಿಂದ ₹10 ಕೊಡೋಕೆ ಆಗಲ್ಲ. ನೀನು ಕಾರು ಖರೀದಿಸುತ್ತೀಯಾ?’ ಎಂದು ಅವಮಾನಿಸಿ, ಹೊರಕಳಿಸಿದ್ದ ಷೊ ರೂಂ ಸಿಬ್ಬಂದಿ ಯುವಕನ ಕ್ಷಮೆಯಾಚಿಸಿದ್ದಾರೆ.</p>.<p>ಹೆಬ್ಬೂರು ಹೋಬಳಿಯ ರಾಮನಪಾಳ್ಯದ ನಿವಾಸಿ ಕೆಂಪೇಗೌಡ ಕಾರು ಖರೀದಿಸಲು ನಗರದಲ್ಲಿರುವ ಷೊ ರೂಂಗೆ ಭೇಟಿ ನೀಡಿದ್ದರು. ಅವರ ಬಟ್ಟೆ ಮತ್ತು ಜತೆಗಿರುವ ಸ್ನೇಹಿತರನ್ನು ನೋಡಿ ಅಲ್ಲಿನ ಸಿಬ್ಬಂದಿ ’ನಿನಗೆ ₹10 ನೀಡುವ ಯೋಗ್ಯತೆಯಿಲ್ಲ’ ಎಂದು ಹೀಯಾಳಿಸಿದ್ದರು. ‘₹10 ಲಕ್ಷ ತಂದರೆ ಕಾರು ಕೊಡುತ್ತೇವೆ‘ ಎಂದು ಷೊ ರೂಂನಿಂದ ವಾಪಸ್ ಕಳುಹಿಸಿದ್ದರು. ಇದನ್ನೇ ಸವಾಲಾಗಿ ಸ್ವೀಕರಿಸಿದ ಯುವಕ, ಘಟನೆ ನಡೆದ ಅರ್ಧ ಗಂಟೆಯಲ್ಲಿ ₹10 ಲಕ್ಷ ಹಣ ಹೊಂದಿಸಿಕೊಂಡು ಹಿಂದಿರುಗಿದ್ದರು.</p>.<p>‘ದೊಡ್ಡ ಮೊತ್ತದ ನಗದು ಒಂದೇ ಬಾರಿ ಸ್ವೀಕರಿಸಲು ಸಾಧ್ಯವಿಲ್ಲ. ಈಗಾಗಲೇ ಆರ್ಟಿಒ ಕಚೇರಿ ಅವಧಿ ಮುಗಿದಿದ್ದರಿಂದ ಕಾರು ನೀಡಲು ಆಗುವುದಿಲ್ಲ’ ಎಂದು ಸಿಬ್ಬಂದಿ ತಿಳಿಸಿದ್ದರು. ಕೆಂಪೇಗೌಡ ತಮಗೆ ಅವಮಾನ ಮಾಡಿದ ಷೊ ರೂಂನಲ್ಲಿ ಕಾರು ಖರೀದಿಸದೇ ಸಿಬ್ಬಂದಿಯ ವರ್ತನೆಯನ್ನು ಖಂಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>