ಹೆಬ್ಬೂರು ಹೋಬಳಿಯ ರಾಮನಪಾಳ್ಯದ ನಿವಾಸಿ ಕೆಂಪೇಗೌಡ ಕಾರು ಖರೀದಿಸಲು ನಗರದಲ್ಲಿರುವ ಷೊ ರೂಂಗೆ ಭೇಟಿ ನೀಡಿದ್ದರು. ಅವರ ಬಟ್ಟೆ ಮತ್ತು ಜತೆಗಿರುವ ಸ್ನೇಹಿತರನ್ನು ನೋಡಿ ಅಲ್ಲಿನ ಸಿಬ್ಬಂದಿ ’ನಿನಗೆ ₹10 ನೀಡುವ ಯೋಗ್ಯತೆಯಿಲ್ಲ’ ಎಂದು ಹೀಯಾಳಿಸಿದ್ದರು. ‘₹10 ಲಕ್ಷ ತಂದರೆ ಕಾರು ಕೊಡುತ್ತೇವೆ‘ ಎಂದು ಷೊ ರೂಂನಿಂದ ವಾಪಸ್ ಕಳುಹಿಸಿದ್ದರು. ಇದನ್ನೇ ಸವಾಲಾಗಿ ಸ್ವೀಕರಿಸಿದ ಯುವಕ, ಘಟನೆ ನಡೆದ ಅರ್ಧ ಗಂಟೆಯಲ್ಲಿ ₹10 ಲಕ್ಷ ಹಣ ಹೊಂದಿಸಿಕೊಂಡು ಹಿಂದಿರುಗಿದ್ದರು.