<p><strong>ಹುಳಿಯಾರು:</strong> ಹೋಬಳಿಯ ಯಳನಡು ಗ್ರಾಮದಲ್ಲಿ ಯುಗಾದಿಯಂದು ಇಸ್ಪೀಟ್ ಆಡುತ್ತಿದ್ದ ಆರೋಪದ ಮೇಲೆ ಪಟ್ಟಣದ ಪೊಲೀಸ್ ಠಾಣೆಗೆ ಕರೆ ತಂದಿದ್ದ ಯಳನಡು ಗ್ರಾಮದ ಗುಡಿಗೌಡ ಕಾಂತರಾಜು (50) ವಿಚಾರಣೆ ಮುಗಿಸಿ ಹೊರ ಬರುವಾಗ ಠಾಣೆ ಆವರಣದಲ್ಲಿಯೇ ಕುಸಿದು ಬಿದ್ದು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ.</p>.<p>ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಯಳನಡು ಗ್ರಾಮಸ್ಥರು ಠಾಣೆಯ ಮುಂದೆ ಜಮಾಯಿಸಿದರು. ಠಾಣೆಯಲ್ಲಿ ಮೃತದೇಹ ಇಟ್ಟು ಪೊಲೀಸರ ವಿರುದ್ಧ ಘೋಷಣೆ ಕೂಗಿದರು.</p>.<p>‘ಪೊಲೀಸರ ದೌರ್ಜನ್ಯವೇ ಸಾವಿಗೆ ಕಾರಣ’ ಎಂದು ಆರೋಪಿಸಿ ಗುರುವಾರ ತಡರಾತ್ರಿ ಯಳನಡು ಗ್ರಾಮಸ್ಥರು ಠಾಣೆ ಮುಂಭಾಗ ಶವವಿಟ್ಟು ಪ್ರತಿಭಟನೆ ನಡೆಸಿದರು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು. ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಪಟ್ಟು ಹಿಡಿದರು.</p>.<p>ಪೊಲೀಸರು ಮತ್ತು ಸಾರ್ವಜನಿಕರ ಮಧ್ಯೆ ತೀವ್ರ ಮಾತಿನ ಚಕಮಕಿ ನಡೆಯಿತು. ಇದರಿಂದ ಗ್ರಾಮದಲ್ಲಿ ಇಡೀ ರಾತ್ರಿ ಉದ್ರಿಕ್ತ ವಾತಾವರಣ ನಿರ್ಮಾಣವಾಗಿತ್ತು. ಪೊಲೀಸರು ಮನವೊಲಿಸಿದ ನಂತರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಯಿತು.</p>.<p>ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ, ಮಾಜಿ ಶಾಸಕ ಕೆ.ಎಸ್.ಕಿರಣ್ಕುಮಾರ್ ಠಾಣೆಗೆ ಭೇಟಿ ನೀಡಿ ಮಾಹಿತಿ ಪಡೆದರು. ‘ಪ್ರಕರಣದ ಕುರಿತು ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು’ ಎಂದು ಒತ್ತಾಯಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ಮಧ್ಯರಾತ್ರಿ ಠಾಣೆಗೆ ತೆರಳಿ ಪರಿಸ್ಥಿತಿ ಪರಿಶೀಲಿಸಿದರು.</p>.<p>‘ಕಾಂತರಾಜು ಅವರದ್ದು ಸಹಜ ಸಾವಲ್ಲ. ಇದು ಪೊಲೀಸ್ ದೌರ್ಜನ್ಯದಿಂದ ನಡೆದ ಕೊಲೆ’ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದರು. ‘ಪೊಲೀಸರು ಠಾಣೆಯಲ್ಲಿ ಹೊಡೆದು, ಅತಿಯಾಗಿ ಬೆದರಿಸಿದ್ದಾರೆ. ದೈಹಿಕ ಮತ್ತು ಮಾನಸಿಕ ಹಿಂಸೆ ತಾಳಲಾರದೆ ಒತ್ತಡಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ’ ಎಂದು ಆರೋಪಿಸಿದರು.</p>.<p> <strong>ಬಿಗಿ ಬಂದೋಬಸ್ತ್</strong> </p><p>ಜಿಲ್ಲಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ನಂತರ ಯಳನಡು ಗ್ರಾಮದ ಕಾಂತರಾಜು ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು. ಘಟನೆ ಕಾರಣಕ್ಕೆ ಗ್ರಾಮದಲ್ಲಿ ಆತಂಕ ಹೆಚ್ಚಾಗಿದ್ದು ಹೆಚ್ಚಿನ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು.</p>.<p> <strong>ಪೊಲೀಸರ ನಿರ್ಲಕ್ಷ್ಯ:</strong> ಕುಟುಂಬಸ್ಥರ ಆರೋಪ ‘ಕಾಂತರಾಜು ಠಾಣೆಯಲ್ಲಿ ಅಸ್ವಸ್ಥರಾಗಿ ಮಲಗಿದ್ದರು. ಪೊಲೀಸರು ನಿರ್ಲಕ್ಷ್ಯ ತೋರಿದರು ಕನಿಷ್ಠ ಕುಡಿಯಲು ನೀರು ಸಹ ಕೊಡಲಿಲ್ಲ’ ಎಂದು ಕಾಂತರಾಜು ಜತೆಗೆ ಠಾಣೆಗೆ ಹೋಗಿದ್ದ ಸತೀಶ್ ಆರೋಪಿಸಿದರು. ‘ನಾವು ಇಸ್ಪೀಟ್ ಆಡುತ್ತಿರಲಿಲ್ಲ. ಏಕಾಏಕಿ ಬಂದು ನಮ್ಮನ್ನು ಕರೆದುಕೊಂಡು ಹೋದರು. ನಾವು ಮಾತಾಡಲು ಸಹ ಬಿಡಲಿಲ್ಲ. ಮೊಬೈಲ್ ಹಣ ತೆಗೆದುಕೊಂಡರು. ಘಟನೆ ನಂತರವೂ ಪೊಲೀಸರು ಏನೂ ಮಾತನಾಡಲಿಲ್ಲ’ ಎಂದು ಸುದ್ದಿಗಾರರಿಗೆ ತಿಳಿಸಿದರು.</p>.<p><strong>ಸಿಐಡಿ ತನಿಖೆ:</strong> ಪರಮೇಶ್ವರ ‘ಠಾಣೆಗೆ ಕರೆ ತಂದ ನಂತರ ಸಾವು ಸಂಭವಿಸಿದೆ. ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲಾಗುವುದು’ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು. ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರ ಜತೆಗೆ ಮಾತನಾಡಿ ‘ಸಾವಿಗೆ ಕಾರಣ ಏನು ಎಂಬುವುದು ಮರಣೋತ್ತರ ಪರೀಕ್ಷೆ ವರದಿಯಲ್ಲಿ ತಿಳಿಯುತ್ತದೆ. ಸಿಐಡಿಗೆ ಕೊಟ್ಟರೆ ಎಲ್ಲ ಮಾಹಿತಿ ಗೊತ್ತಾಗಲಿದೆ. ಪೊಲೀಸರು ಹೊಡೆದಿದ್ದರಿಂದ ಮೃತಪಟ್ಟಿದ್ದಾರೆ ಎಂಬುವುದು ಖಚಿತವಾದರೆ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಳಿಯಾರು:</strong> ಹೋಬಳಿಯ ಯಳನಡು ಗ್ರಾಮದಲ್ಲಿ ಯುಗಾದಿಯಂದು ಇಸ್ಪೀಟ್ ಆಡುತ್ತಿದ್ದ ಆರೋಪದ ಮೇಲೆ ಪಟ್ಟಣದ ಪೊಲೀಸ್ ಠಾಣೆಗೆ ಕರೆ ತಂದಿದ್ದ ಯಳನಡು ಗ್ರಾಮದ ಗುಡಿಗೌಡ ಕಾಂತರಾಜು (50) ವಿಚಾರಣೆ ಮುಗಿಸಿ ಹೊರ ಬರುವಾಗ ಠಾಣೆ ಆವರಣದಲ್ಲಿಯೇ ಕುಸಿದು ಬಿದ್ದು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ.</p>.<p>ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಯಳನಡು ಗ್ರಾಮಸ್ಥರು ಠಾಣೆಯ ಮುಂದೆ ಜಮಾಯಿಸಿದರು. ಠಾಣೆಯಲ್ಲಿ ಮೃತದೇಹ ಇಟ್ಟು ಪೊಲೀಸರ ವಿರುದ್ಧ ಘೋಷಣೆ ಕೂಗಿದರು.</p>.<p>‘ಪೊಲೀಸರ ದೌರ್ಜನ್ಯವೇ ಸಾವಿಗೆ ಕಾರಣ’ ಎಂದು ಆರೋಪಿಸಿ ಗುರುವಾರ ತಡರಾತ್ರಿ ಯಳನಡು ಗ್ರಾಮಸ್ಥರು ಠಾಣೆ ಮುಂಭಾಗ ಶವವಿಟ್ಟು ಪ್ರತಿಭಟನೆ ನಡೆಸಿದರು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು. ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಪಟ್ಟು ಹಿಡಿದರು.</p>.<p>ಪೊಲೀಸರು ಮತ್ತು ಸಾರ್ವಜನಿಕರ ಮಧ್ಯೆ ತೀವ್ರ ಮಾತಿನ ಚಕಮಕಿ ನಡೆಯಿತು. ಇದರಿಂದ ಗ್ರಾಮದಲ್ಲಿ ಇಡೀ ರಾತ್ರಿ ಉದ್ರಿಕ್ತ ವಾತಾವರಣ ನಿರ್ಮಾಣವಾಗಿತ್ತು. ಪೊಲೀಸರು ಮನವೊಲಿಸಿದ ನಂತರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಯಿತು.</p>.<p>ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ, ಮಾಜಿ ಶಾಸಕ ಕೆ.ಎಸ್.ಕಿರಣ್ಕುಮಾರ್ ಠಾಣೆಗೆ ಭೇಟಿ ನೀಡಿ ಮಾಹಿತಿ ಪಡೆದರು. ‘ಪ್ರಕರಣದ ಕುರಿತು ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು’ ಎಂದು ಒತ್ತಾಯಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ಮಧ್ಯರಾತ್ರಿ ಠಾಣೆಗೆ ತೆರಳಿ ಪರಿಸ್ಥಿತಿ ಪರಿಶೀಲಿಸಿದರು.</p>.<p>‘ಕಾಂತರಾಜು ಅವರದ್ದು ಸಹಜ ಸಾವಲ್ಲ. ಇದು ಪೊಲೀಸ್ ದೌರ್ಜನ್ಯದಿಂದ ನಡೆದ ಕೊಲೆ’ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದರು. ‘ಪೊಲೀಸರು ಠಾಣೆಯಲ್ಲಿ ಹೊಡೆದು, ಅತಿಯಾಗಿ ಬೆದರಿಸಿದ್ದಾರೆ. ದೈಹಿಕ ಮತ್ತು ಮಾನಸಿಕ ಹಿಂಸೆ ತಾಳಲಾರದೆ ಒತ್ತಡಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ’ ಎಂದು ಆರೋಪಿಸಿದರು.</p>.<p> <strong>ಬಿಗಿ ಬಂದೋಬಸ್ತ್</strong> </p><p>ಜಿಲ್ಲಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ನಂತರ ಯಳನಡು ಗ್ರಾಮದ ಕಾಂತರಾಜು ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು. ಘಟನೆ ಕಾರಣಕ್ಕೆ ಗ್ರಾಮದಲ್ಲಿ ಆತಂಕ ಹೆಚ್ಚಾಗಿದ್ದು ಹೆಚ್ಚಿನ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು.</p>.<p> <strong>ಪೊಲೀಸರ ನಿರ್ಲಕ್ಷ್ಯ:</strong> ಕುಟುಂಬಸ್ಥರ ಆರೋಪ ‘ಕಾಂತರಾಜು ಠಾಣೆಯಲ್ಲಿ ಅಸ್ವಸ್ಥರಾಗಿ ಮಲಗಿದ್ದರು. ಪೊಲೀಸರು ನಿರ್ಲಕ್ಷ್ಯ ತೋರಿದರು ಕನಿಷ್ಠ ಕುಡಿಯಲು ನೀರು ಸಹ ಕೊಡಲಿಲ್ಲ’ ಎಂದು ಕಾಂತರಾಜು ಜತೆಗೆ ಠಾಣೆಗೆ ಹೋಗಿದ್ದ ಸತೀಶ್ ಆರೋಪಿಸಿದರು. ‘ನಾವು ಇಸ್ಪೀಟ್ ಆಡುತ್ತಿರಲಿಲ್ಲ. ಏಕಾಏಕಿ ಬಂದು ನಮ್ಮನ್ನು ಕರೆದುಕೊಂಡು ಹೋದರು. ನಾವು ಮಾತಾಡಲು ಸಹ ಬಿಡಲಿಲ್ಲ. ಮೊಬೈಲ್ ಹಣ ತೆಗೆದುಕೊಂಡರು. ಘಟನೆ ನಂತರವೂ ಪೊಲೀಸರು ಏನೂ ಮಾತನಾಡಲಿಲ್ಲ’ ಎಂದು ಸುದ್ದಿಗಾರರಿಗೆ ತಿಳಿಸಿದರು.</p>.<p><strong>ಸಿಐಡಿ ತನಿಖೆ:</strong> ಪರಮೇಶ್ವರ ‘ಠಾಣೆಗೆ ಕರೆ ತಂದ ನಂತರ ಸಾವು ಸಂಭವಿಸಿದೆ. ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲಾಗುವುದು’ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು. ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರ ಜತೆಗೆ ಮಾತನಾಡಿ ‘ಸಾವಿಗೆ ಕಾರಣ ಏನು ಎಂಬುವುದು ಮರಣೋತ್ತರ ಪರೀಕ್ಷೆ ವರದಿಯಲ್ಲಿ ತಿಳಿಯುತ್ತದೆ. ಸಿಐಡಿಗೆ ಕೊಟ್ಟರೆ ಎಲ್ಲ ಮಾಹಿತಿ ಗೊತ್ತಾಗಲಿದೆ. ಪೊಲೀಸರು ಹೊಡೆದಿದ್ದರಿಂದ ಮೃತಪಟ್ಟಿದ್ದಾರೆ ಎಂಬುವುದು ಖಚಿತವಾದರೆ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>