ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: ಪೊಲೀಸರ ಹಲ್ಲೆ- ವ್ಯಕ್ತಿ ಸಾವು

Last Updated 4 ಡಿಸೆಂಬರ್ 2022, 20:45 IST
ಅಕ್ಷರ ಗಾತ್ರ

ತುಮಕೂರು: ವಿಚಾರಣೆಗೆಂದು ಪೊಲೀಸ್‌ ಠಾಣೆಗೆ ಹೋಗಿದ್ದ ವ್ಯಕ್ತಿಯೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ. ಪೊಲೀಸರ ಥಳಿತದಿಂದ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ನಗರ ಹೊರವಲಯದ ಶೆಟ್ಟಿಹಳ್ಳಿ ಬಳಿಯ ನಾಯಕರ ಬೀದಿ ನಿವಾಸಿ ಹನುಮಂತರಾಯಪ್ಪ (58) ಮೃತಪಟ್ಟವರು.

ಪೊಲೀಸರ ಥಳಿತದಿಂದ ಮೃತಪಟ್ಟಿದ್ದಾರೆ ಎಂದು ಆರೋಪಿಸಿ ಸ್ಥಳೀಯರು ಭಾನುವಾರ ರಾತ್ರಿ ರಿಂಗ್ ರಸ್ತೆಯಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ.

ಹನುಮಂತರಾಯಪ್ಪ ಗಾರೆ ಕೆಲಸ ಮಾಡಿಕೊಂಡಿದ್ದರು. ಸೈಕಲ್ ಕಳ್ಳತನ ವಿಚಾರಕ್ಕೆ ಸಂಬಂಧಿಸಿದಂತೆ ನಗರದ ಜಯನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಶನಿವಾರ ರಾತ್ರಿ 10 ಗಂಟೆಗೆ ವಿಚಾರಣೆಗಾಗಿ ಠಾಣೆಗೆ ಕರೆದುಕೊಂಡು ಹೋಗಿ, ಮಧ್ಯರಾತ್ರಿ 12.30 ಗಂಟೆಯ ಸುಮಾರಿಗೆ ವಾಪಸ್‌ ಕಳುಹಿಸಿದ್ದರು. ಭಾನುವಾರ ಮತ್ತೆ ವಿಚಾರಣೆ ನೆಪದಲ್ಲಿ ಸಂಜೆ 6 ಗಂಟೆಗೆ ಠಾಣೆಗೆ ಕರೆದುಕೊಂಡು ಹೋಗಿದ್ದರು. ಬಳಿಕ ಸಂಜೆ 6.30 ಗಂಟೆಯ ಸುಮಾರಿಗೆ ಶೆಟ್ಟಿಹಳ್ಳಿ ರಿಂಗ್‌ ರಸ್ತೆಯ ಬಳಿ ಬಿಟ್ಟು ಹೋಗಿದ್ದರು.

ಪೊಲೀಸರೇ ಕಿರುಕುಳ ಕೊಟ್ಟು ಹಲ್ಲೆ ಮಾಡಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದರೆ, ಪೊಲೀಸ್ ಅಧಿಕಾರಿಗಳು ಖಚಿತಪಡಿಸಿಲ್ಲ.

ತನಿಖೆ ನಡೆಸಿದ ನಂತರ ಏನೆಂಬುದು ಗೊತ್ತಾಗಲಿದೆ ಎಂದು ಎಎಸ್ಪಿ ಉದೇಶ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT