ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಹಾಲಗಾನಹಳ್ಳಿ ಗ್ರಾಮದವರಾದ ದರ್ಶನ್, ಅಜಿತ್ ಹಾಗೂ ರಮೇಶ್ ಬುಧವಾರ ಸಂಜೆ ಚಿಕ್ಕಮಾಲೂರು ಗ್ರಾಮದಲ್ಲಿ ಇಟ್ಟಿಗೆ ಅನ್ ಲೋಡ್ ಮಾಡಿ ಸ್ವಗ್ರಾಮಕ್ಕೆ ಹೋಗುವಾಗ ಟ್ರ್ಯಾಕ್ಟರ್ ಆಯತಪ್ಪಿ ಉರುಳು ಬಿದ್ದಿದೆ. ಪೊಲೀಸರು ಹಾಗೂ ಸಾರ್ವಜನಿಕರು ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ಸಾಗಿಸಿದ್ದಾರೆ.