ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧುಗಿರಿ: ಟ್ರ್ಯಾಕ್ಟರ್ ಪಲ್ಟಿಯಾಗಿ ವ್ಯಕ್ತಿ ಸಾವು

Last Updated 11 ಜನವರಿ 2023, 16:48 IST
ಅಕ್ಷರ ಗಾತ್ರ

ಮಧುಗಿರಿ: ತಾಲ್ಲೂಕಿನ ಕೊಡಿಗೇನಹಳ್ಳಿ ಹೋಬಳಿಯ ದೊಡ್ಡಮಾಲೂರು ಹಾಗೂ ಶ್ರಾವಂಡನಹಳ್ಳಿ ರಸ್ತೆಯಲ್ಲಿ ಬುಧವಾರ ಸಂಜೆ ಟ್ರ್ಯಾಕ್ಟರ್ ಉರುಳಿ ಬಿದ್ದು, ಟ್ರ್ಯಾಕ್ಟರ್ ನಲ್ಲಿದ್ದ ದರ್ಶನ್ (20) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಗಾಯಗೊಂಡ ಅಜಿತ್ (30) ರಮೇಶ್(25) ಎಂಬುವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಹಾಲಗಾನಹಳ್ಳಿ ಗ್ರಾಮದವರಾದ ದರ್ಶನ್, ಅಜಿತ್ ಹಾಗೂ ರಮೇಶ್ ಬುಧವಾರ ಸಂಜೆ ಚಿಕ್ಕಮಾಲೂರು ಗ್ರಾಮದಲ್ಲಿ ಇಟ್ಟಿಗೆ ಅನ್ ಲೋಡ್ ಮಾಡಿ ಸ್ವಗ್ರಾಮಕ್ಕೆ ಹೋಗುವಾಗ ಟ್ರ್ಯಾಕ್ಟರ್ ಆಯತಪ್ಪಿ ಉರುಳು ಬಿದ್ದಿದೆ. ಪೊಲೀಸರು ಹಾಗೂ ಸಾರ್ವಜನಿಕರು ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ಸಾಗಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT