ತಿಪಟೂರು: ತಾಲ್ಲೂಕಿನ ಹೊನ್ನವಳ್ಳಿ ಹೋಬಳಿ ತಿಮ್ಲಾಪುರ ಗ್ರಾಮದ ಬಳಿ ಕಾರು ಮತ್ತು ಬೈಕ್ ನಡುವೆ ಭಾನುವಾರ ನಡೆದ ಅಪಘಾತದಲ್ಲಿ ಬೈಕ್ ಸವಾರ ಹೊನ್ನವಳ್ಳಿ ಗ್ರಾಮದ ಸೋಮಶೇಖರ್ (42) ಮೃತಪಟ್ಟಿದ್ದಾರೆ. ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳು ಉಮೇಶ್ ಅವರ ಕಾಲು ಮುರಿದಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಸೋಮಶೇಖರ್ ತಮ್ಮ ಜಮೀನಿನಲ್ಲಿ ಬೆಳೆದಿದ್ದ ಅವರೆಕಾಯಿಯನ್ನು ನಗರದ ಬೀದಿ ಬದಿಯಲ್ಲಿ ಮಾರಾಟ ಮಾಡಿ ಊರಿಗೆ ಮರಳುವಾಗ ಅಪಘಾತವಾಗಿದೆ.