ತಿಪಟೂರು: ರಾಷ್ಟ್ರೀಯ ಹೆದ್ದಾರಿ 206ರ ಮತ್ತಿಹಳ್ಳಿ ಗೇಟ್ ಬಳಿ ತಿಪಟೂರಿನಿಂದ ಅರಸೀಕೆರೆ ಕಡೆ ತೆರಳುತ್ತಿದ್ದ ಬೈಕ್ಗೆ ನಾಯಿ ಅಡ್ಡ ಬಂದ ಕಾರಣ ಬೈಕ್ ಅನ್ನು ಬಲಕ್ಕೆ ತಿರುಗಿಸಿದ್ದಾರೆ. ಆಗ ಹಿಂಬದಿಯಿಂದ ಬಂದ ಕೆಎಸ್ಆರ್ಟಿಸಿ ಬಸ್ ಬೈಕ್ಗೆ ಡಿಕ್ಕಿ ಹೊಡೆದಿದೆ. ಹಿಂಬದಿ ಸವಾರ ಪೆದ್ದಿಹಳ್ಳಿ ಗ್ರಾಮದ ನಂಜಪ್ಪ (65) ಸ್ಥಳದಲ್ಲೇ ಮೃತಪಟ್ಟಿದ್ದಾರೆ.