ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

2040ರ ವೇಳೆಗೆ ಚಂದ್ರನ ಮೇಲೆ ಮಾನವ: ಇಸ್ರೊ ಮಾಜಿ ಅಧ್ಯಕ್ಷ ಕಿರಣ್‌ಕುಮಾರ್‌

Published 5 ಫೆಬ್ರುವರಿ 2024, 14:25 IST
Last Updated 5 ಫೆಬ್ರುವರಿ 2024, 14:25 IST
ಅಕ್ಷರ ಗಾತ್ರ

ಪಟ್ಟನಾಯಕನಹಳ್ಳಿ: 2040ರಲ್ಲಿ ಚಂದ್ರನಲ್ಲಿಗೆ ಮಾನವನನ್ನು ಕಳುಹಿಸಲು ಇಸ್ರೊ ತಯಾರಿ ನಡೆಸಿದೆ ಎಂದು ಇಸ್ರೊ ಮಾಜಿ ಅಧ್ಯಕ್ಷ ಎ.ಎಸ್.ಕಿರಣ್ ಕುಮಾರ್ ಹೇಳಿದರು.

ಇಲ್ಲಿನ ಜಾತ್ರಾ ಮಹೋತ್ಸವದ ಅಂಗವಾಗಿ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ವೇದಿಕೆಯಲ್ಲಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ವಿಜ್ಞಾನ ಮೇಳ ಹಾಗೂ ಸಂವಾದ ಉದ್ಘಾಟಿಸಿ ಮಾತನಾಡಿದರು.

ಮಕ್ಕಳಿಗೆ ಎಳೆಯ ವಯಸ್ಸಿನಲ್ಲಿಯೇ ಪ್ರಶ್ನಿಸುವ ಮನೋಭಾವ, ಎಲ್ಲ ವಿಚಾರದಲ್ಲಿ ಕುತೂಹಲ ಮೂಡುವ ಭಾವನೆ ಮೂಡುತ್ತದೆ.  ಇದಕ್ಕೆ ಪೋಷಕರು ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕಿದೆ. ಈ ಮೂಲಕ ಅವರ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕು. ತಂದೆ–ತಾಯಂದಿರು ಒತ್ತಡದ ಬದುಕಿನ ಆವಸರದಲ್ಲಿ ಮಕ್ಕಳ ಬಾಲ್ಯವನ್ನು ಚಿವುಟಬಾರದು ಎಂದು ಕಿವಿಮಾತು ಹೇಳಿದರು.

ಹಲವು ಸಂಶೋಧನೆಗಳ ಹುಟ್ಟಿಗೆ ಕುತೂಹಲವೇ ಕಾರಣ. ಇದನ್ನು ತಣಿಸುವ ಸಾಹಸವೇ ಪ್ರಯತ್ನವಾಗಿದ್ದು, ಪ್ರತಿಯೊಬ್ಬರೂ ಕೂಡ ಏನಾದರೂ ಹೊಸತನ್ನು ಸಂಶೋಧಿಸುವ ಪ್ರಯತ್ನ ಮಾಡುವ ಮನೋಭಾವ ರೂಢಿಸಿಕೊಳ್ಳಬೇಕು ಎಂದರು.

ಬಳಿಕ ಭಾರತದ ಬಾಹ್ಯಾಕಾಶ ಕ್ಷೇತ್ರದ ಸಾಧನೆಗಳ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ ನೆಡಸಿ, ವಿದ್ಯಾರ್ಥಿಗಳ ಕುತೂಹಲದ ಪ್ರಶ್ನೆಗಳಿಗೆ ಉತ್ತರ ನೀಡಿದರು.

ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿ, ಮಾಜಿ ಶಾಸಕ ಸಿ.ಎಂ.ರಾಜೇಶ್ ಗೌಡ ಮಾತನಾಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್. ಕೃಷ್ಣಪ್ಪ, ಮಧುಗಿರಿ ಡಯಟ್ ಪ್ರಾಂಶುಪಾಲ ಗಂಗಾಧರ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಗಂಗಾಧರ್, ಸರ್ಕಾರಿ ಶಿಕ್ಷಕರ ತರಬೇತಿ ಸಂಸ್ಥೆ ಪ್ರಾಂಶುಪಾಲ ತಿಮ್ಮರಾಜು, ಕ್ಷೇತ್ರ ಸಂಪನ್ಮೂಲ ಸಮನ್ವಯ ವ್ಯಕ್ತಿ ಕುಮಾರ್,  ಶ್ರೀನಿವಾಸ್ ಮಂಜುನಾಥ್ ಹನುಮಂತರಾಜು, ವಿಜಯಕುಮಾರ್, ಎ.ಆರ್. ಶ್ರೀನಿವಾಸಯ್ಯ, ಸುಹಾಸಿನಿ ಕಿರಣ್ ಕುಮಾರ್ ಇದ್ದರು.

ವಿದ್ಯಾರ್ಥಿನಿ ಸಾಧನೆಗೆ ಮೆಚ್ಚುಗೆ
2024ರ ಮೇ ನಲ್ಲಿ ಜಪಾನ್ ದೇಶದಲ್ಲಿ ನಡೆಯುವ ಅಂತರರಾಷ್ಟ್ರೀಯ ವಿಜ್ಞಾನ ವಸ್ತು ಪ್ರದರ್ಶನಕ್ಕೆ ಆಯ್ಕೆಯಾಗಿರುವ ತಾಳಗುಂದ ಸರ್ಕಾರಿ ಶಾಲೆ 9ನೇ ತರಗತಿ ವಿದ್ಯಾರ್ಥಿನಿ ಪ್ರಿಯಾಂಕ ಶಿಕ್ಷಕಿ ರೂಪ ಅವರ ಮಾರ್ಗದರ್ಶನದಲ್ಲಿ ರೂಪಿಸಿದ ‘ಆಟೋಮ್ಯಾಟಿಕ್ ಪೆಸ್ಟಿಸೈಡ್ ಸ್ಪೇಯರ’ ಮಾದರಿಯನ್ನು ಕಿರಣ್‌ಕುಮಾರ್‌ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT