ಸಂತೋಷ ತಾಲ್ಲೂಕಿನ ಕೆಬ್ಬಳಿಯ ಶಾಲಿನಿ ಎಂಬ ಯುವತಿಯನ್ನು ಪ್ರೀತಿಸುತ್ತಿದ್ದ, ವಿವಾಹಕ್ಕೆ ಪೋಷಕರು ನಿರಾಕರಿಸಿದ ಕಾರಣ ಶಾಲಿನಿ ಕಳೆದ ಅಕ್ಟೋಬರ್ 25 ರಂದು ವಿಷ ಸೇವಿಸಿದ್ದರು. ಮಂಡ್ಯದ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆ ಫಲಕಾರಿಯಾಗದೆ 27 ರಂದು ಕೊನೆಯುಸಿರೆಳೆದಿದ್ದರು. ಯುವತಿಯ ಆತ್ಮಹತ್ಯೆಯ ಸುದ್ದಿ ಕೇಳಿದ ಸಂತೋಷ ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದರು, ಪೋಷಕರು ಚಿಕಿತ್ಸೆ ಕೊಡಿಸಿದ್ದರು.