ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಂಜಾ ಸಾಗಾಟ: ಇಬ್ಬರ ಬಂಧನ

Last Updated 17 ಸೆಪ್ಟೆಂಬರ್ 2021, 2:02 IST
ಅಕ್ಷರ ಗಾತ್ರ

ತಿಪಟೂರು: ಗಾಂಜಾ ಸಾಗಾಣಿಕೆ, ಮಾರಾಟ ಮಾಡುತ್ತಿದ್ದ ಇಬ್ಬರನ್ನು ತಾಲ್ಲೂಕಿನ ಅಬಕಾರಿ ಅಧಿಕಾರಿಗಳು ಬಂಧಿಸಿದ್ದಾರೆ.

ಹಲವು ತಿಂಗಳುಗಳಿಂದ ನಗರದಲ್ಲಿ ಗಾಂಜಾ ಮಾರಾಟದ ಬಗ್ಗೆ ಸಾರ್ವಜನಿಕರಿಂದ ದೂರು ಕೇಳಿಬಂದಿತ್ತು.

ಅಬಕಾರಿ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಗಾಂಜಾ ಸಾಗಾಟ ಮಾಡುತ್ತಿದ್ದ ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಕಂತೇನಹಳ್ಳಿ ಗ್ರಾಮದ ರವಿ.ಕೆ.ಎಸ್., ನರಸೀಪುರ ಗ್ರಾಮದ ಮಂಜುನಾಥ್ ಅವರನ್ನು ಬಂಧಿಸಿದ್ದಾರೆ.

ಆರೋಪಿಗಳಿಂದ 500 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಕಾರ್ಯಚರಣೆಯಲ್ಲಿ ಅಬಕಾರಿ ಉಪ ನೀರಿಕ್ಷಕ ಜಿ.ಆರ್.ನಾಗರಾಜು, ಎಸ್.ಪ್ರಸನ್ನ, ಎಲ್.ಆರ್.ರೇವಣ್ಣ, ಮುಕ್ತಾಸ್, ಚಂದ್ರಶೇಖರ್, ಮಂಜುನಾಥ್, ಉಮೇಶ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT