ಮಳೆಗಾಲದಲ್ಲಿ ನೀರು ಮಾರುಕಟ್ಟೆ ಒಳಗೆ ನುಗ್ಗಿ ಅವಾಂತರ ಸೃಷ್ಟಿಸುತಿತ್ತು. ಸಮರ್ಪಕವಾದ ಚರಂಡಿ ವ್ಯವಸ್ಥೆ ಇಲ್ಲದೆ ಸಮಸ್ಯೆಯಾಗಿತ್ತು. ಸುಸಜ್ಜಿತ ಮಾರುಕಟ್ಟೆ ನಿರ್ಮಾಣ ಆಗಬೇಕು ಎಂದು ಒತ್ತಾಯಿಸುತ್ತಲೇ ಬಂದಿದ್ದೇವೆ. ಮಾರುಕಟ್ಟೆ ಅಭಿವೃದ್ಧಿಗೆ ವಿರೋಧ ಮಾಡುತ್ತಿಲ್ಲ. ವ್ಯಾಪಾರಕ್ಕೆ ಪರ್ಯಾಯ ವ್ಯವಸ್ಥೆಮಾಡದೆ ಏಕಾಏಕಿ ಕೆಲಸ ಆರಂಭಿಸಲಾಗಿದೆ. ಇದರಿಂದ ಕೋವಿಡ್ ಸಮಯದಲ್ಲಿ ಸಮಸ್ಯೆಗೆ ಸಿಲುಕಬೇಕಾಯಿತು ಎಂದು ವರ್ತಕರು ದೂರಿದರು.