<p><strong>ಕುಣಿಗಲ್ (ತುಮಕೂರು):</strong> ತಾಲ್ಲೂಕಿನ ಮಾರ್ಕೋನಹಳ್ಳಿ ಜಲಾಶಯದ ನೀರಿನಲ್ಲಿ ಕೊಚ್ಚಿ ಹೋಗಿದ್ದ ನಾಲ್ವರ ಪೈಕಿ ಬುಧವಾರ ಇಬ್ಬರ ಶವ ಪತ್ತೆಯಾಗಿವೆ. ಮತ್ತಿಬ್ಬರ ಪತ್ತೆಗೆ ಅಗ್ನಿಶಾಮಕ ದಳದ ಸಿಬ್ಬಂದಿ ಎಷ್ಟೇ ಸಾಹಸಪಟ್ಟರೂ ಪ್ರಯೋಜನವಾಗಿಲ್ಲ.</p>.<p>ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಶಶಿಧರ್ ನೇತೃತ್ವದ ತಂಡ ಬುಧವಾರ ಸಂಜೆವರೆಗೂ ಮೂರು ಕಿ.ಮೀ. ವ್ಯಾಪ್ತಿಯಲ್ಲಿ ಶೋಧ ನಡೆಸಿದ್ದು ನಿಫ್ರಾ (4) ಮತ್ತು ಶಬನಾ (44) ಎಂಬುವರ ಶವಗಳು ಪತ್ತೆಯಾಗಿವೆ. ಮೋಹಿಬ್ (11) ಮತ್ತು ತಬಸ್ಸಮ್ (46) ಇನ್ನೂ ಪತ್ತೆಯಾಗಿಲ್ಲ.</p>.<p>ಮಾರ್ಕೋನಹಳ್ಳಿ ಜಲಾಶಯಕ್ಕೆ ವಿಹಾರಕ್ಕೆ ಹೋಗಿದ್ದ ಕುಟುಂಬದ ಸದಸ್ಯರು ಬೆಟ್ಟಗೊಂಡನಹಳ್ಳಿ ಕಾಲುವೆಯಲ್ಲಿ ನೀರಿಗೆ ಇಳಿದಿದ್ದರು. ಹತ್ತು ಮಂದಿ ಕೊಚ್ಚಿಕೊಂಡು ಹೋಗಿದ್ದರು. ಆ ಪೈಕಿ ಮೂವರು ಪಾರಾಗಿದ್ದರು. ಇಬ್ಬರ ಶವ ಮಂಗಳವಾರ ಪತ್ತೆಯಾಗಿದ್ದವು. ನಾಲ್ವರು ಕಾಣೆಯಾಗಿದ್ದರು. ಕತ್ತಲಾಗಿದ್ದರಿಂದ ಶೋಧ ಕಾರ್ಯ ನಿಲ್ಲಿಸಲಾಗಿತ್ತು.</p>.<p>ಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ ಆರು ಜನರ ಪೈಕಿ ನಾಲ್ವರ ಶವ ಸಿಕ್ಕಿದ್ದು, ಇನ್ನೂ ಇಬ್ಬರು ಪತ್ತೆಯಾಗಿಲ್ಲ. ಅವರು ಬದುಕುಳಿದಿರುವ ಸಾಧ್ಯತೆ ಕ್ಷೀಣ ಎಂದು ಅಗ್ನಿಶಾಮಕ ದಳದ ಸಿಬ್ಬಂದಿ ತಿಳಿಸಿದ್ದಾರೆ. ಗುರುವಾರ ಮುಂಜಾನೆ ಮತ್ತೆ ಶೋಧ ಕಾರ್ಯ ಮುಂದುವರೆಯಲಿದೆ.</p>.<p>ದುರಂತ ನಡೆದ ಮಾರ್ಕೋನಹಳ್ಳಿ ಜಲಾಶಯಕ್ಕೆ ಶಾಸಕ ಡಾ.ರಂಗನಾಥ್ ಬುಧವಾರ ಭೇಟಿ ನೀಡಿ ಪರಶೀಲಿಸಿದರು. ‘ಜಲಾಶಯ ವ್ಯಾಪ್ತಿಯಲ್ಲಿ ಎಚ್ಚರಿಕೆಯ ಫಲಕ ಅಳವಡಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ಅವರು ತಿಳಿಸಿದರು.</p>.<p>ನಂತರ ತಾಲ್ಲೂಕಿನ ಮಾಗಡಿಪಾಳ್ಯದ ಮೃತ ವ್ಯಕ್ತಿ ಸಾಜಿದಾ ಮನೆಗೆ ತೆರಳಿ ಕುಟುಂಬದವರಿಗೆ ಸಾಂತ್ವನ ಹೇಳಿ ₹1 ಲಕ್ಷ ಪರಿಹಾರಧನ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಣಿಗಲ್ (ತುಮಕೂರು):</strong> ತಾಲ್ಲೂಕಿನ ಮಾರ್ಕೋನಹಳ್ಳಿ ಜಲಾಶಯದ ನೀರಿನಲ್ಲಿ ಕೊಚ್ಚಿ ಹೋಗಿದ್ದ ನಾಲ್ವರ ಪೈಕಿ ಬುಧವಾರ ಇಬ್ಬರ ಶವ ಪತ್ತೆಯಾಗಿವೆ. ಮತ್ತಿಬ್ಬರ ಪತ್ತೆಗೆ ಅಗ್ನಿಶಾಮಕ ದಳದ ಸಿಬ್ಬಂದಿ ಎಷ್ಟೇ ಸಾಹಸಪಟ್ಟರೂ ಪ್ರಯೋಜನವಾಗಿಲ್ಲ.</p>.<p>ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಶಶಿಧರ್ ನೇತೃತ್ವದ ತಂಡ ಬುಧವಾರ ಸಂಜೆವರೆಗೂ ಮೂರು ಕಿ.ಮೀ. ವ್ಯಾಪ್ತಿಯಲ್ಲಿ ಶೋಧ ನಡೆಸಿದ್ದು ನಿಫ್ರಾ (4) ಮತ್ತು ಶಬನಾ (44) ಎಂಬುವರ ಶವಗಳು ಪತ್ತೆಯಾಗಿವೆ. ಮೋಹಿಬ್ (11) ಮತ್ತು ತಬಸ್ಸಮ್ (46) ಇನ್ನೂ ಪತ್ತೆಯಾಗಿಲ್ಲ.</p>.<p>ಮಾರ್ಕೋನಹಳ್ಳಿ ಜಲಾಶಯಕ್ಕೆ ವಿಹಾರಕ್ಕೆ ಹೋಗಿದ್ದ ಕುಟುಂಬದ ಸದಸ್ಯರು ಬೆಟ್ಟಗೊಂಡನಹಳ್ಳಿ ಕಾಲುವೆಯಲ್ಲಿ ನೀರಿಗೆ ಇಳಿದಿದ್ದರು. ಹತ್ತು ಮಂದಿ ಕೊಚ್ಚಿಕೊಂಡು ಹೋಗಿದ್ದರು. ಆ ಪೈಕಿ ಮೂವರು ಪಾರಾಗಿದ್ದರು. ಇಬ್ಬರ ಶವ ಮಂಗಳವಾರ ಪತ್ತೆಯಾಗಿದ್ದವು. ನಾಲ್ವರು ಕಾಣೆಯಾಗಿದ್ದರು. ಕತ್ತಲಾಗಿದ್ದರಿಂದ ಶೋಧ ಕಾರ್ಯ ನಿಲ್ಲಿಸಲಾಗಿತ್ತು.</p>.<p>ಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ ಆರು ಜನರ ಪೈಕಿ ನಾಲ್ವರ ಶವ ಸಿಕ್ಕಿದ್ದು, ಇನ್ನೂ ಇಬ್ಬರು ಪತ್ತೆಯಾಗಿಲ್ಲ. ಅವರು ಬದುಕುಳಿದಿರುವ ಸಾಧ್ಯತೆ ಕ್ಷೀಣ ಎಂದು ಅಗ್ನಿಶಾಮಕ ದಳದ ಸಿಬ್ಬಂದಿ ತಿಳಿಸಿದ್ದಾರೆ. ಗುರುವಾರ ಮುಂಜಾನೆ ಮತ್ತೆ ಶೋಧ ಕಾರ್ಯ ಮುಂದುವರೆಯಲಿದೆ.</p>.<p>ದುರಂತ ನಡೆದ ಮಾರ್ಕೋನಹಳ್ಳಿ ಜಲಾಶಯಕ್ಕೆ ಶಾಸಕ ಡಾ.ರಂಗನಾಥ್ ಬುಧವಾರ ಭೇಟಿ ನೀಡಿ ಪರಶೀಲಿಸಿದರು. ‘ಜಲಾಶಯ ವ್ಯಾಪ್ತಿಯಲ್ಲಿ ಎಚ್ಚರಿಕೆಯ ಫಲಕ ಅಳವಡಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ಅವರು ತಿಳಿಸಿದರು.</p>.<p>ನಂತರ ತಾಲ್ಲೂಕಿನ ಮಾಗಡಿಪಾಳ್ಯದ ಮೃತ ವ್ಯಕ್ತಿ ಸಾಜಿದಾ ಮನೆಗೆ ತೆರಳಿ ಕುಟುಂಬದವರಿಗೆ ಸಾಂತ್ವನ ಹೇಳಿ ₹1 ಲಕ್ಷ ಪರಿಹಾರಧನ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>