<p><strong>ಕುಣಿಗಲ್:</strong> ಯುವ ರೈತರು ಜೀವನ ಸಂಗಾತಿ ಹುಡುಕುವಲ್ಲಿ ಎದುರಿಸುತ್ತಿರುವ ಸಮಸ್ಯೆ ಪರಿಹರಿಸಲು ವಿಶೇಷ ಪ್ರೋತ್ಸಾಹ ಯೋಜನೆಯನ್ನು ಜಾರಿಗೆ ತರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶಾಸಕ ಎಚ್.ಡಿ.ರಂಗನಾಥ್ ಒತ್ತಾಯಿಸಿದ್ದಾರೆ.</p>.<p>ಫೆಬ್ರವರಿ 18ರಂದು ಬರೆದ ಪತ್ರದಲ್ಲಿ ಅವರು, ಮುಂಬರುವ ವಿಧಾನಸಭಾ ಅಧಿವೇಶನದಲ್ಲಿ ಈ ಕ್ರಮ ಕೈಗೊಳ್ಳುವಂತೆ ಪ್ರಸ್ತಾಪಿಸಿದ್ದಾರೆ.</p>.<p>‘ನನ್ನ ಕ್ಷೇತ್ರವಾದ ಕುಣಿಗಲ್ ತಾಲೂಕು ಪ್ರಧಾನವಾಗಿ ಗ್ರಾಮೀಣ ಪ್ರದೇಶ. ಕೃಷಿ ಮೇಲೆ ಹೆಚ್ಚು ಅವಲಂಬಿತವಾಗಿದೆ. ಹೆಚ್ಚಿನ ಸಂಖ್ಯೆ ಯುವಕರು ಹಳ್ಳಿಗಳಲ್ಲಿ ವಾಸಿಸುತ್ತಾ ಕೃಷಿ ಮೂಲಕ ಜೀವನೋಪಾಯ ಕಂಡುಕೊಂಡಿದ್ದಾರೆ. ಆದರೆ, ಅನೇಕ ಮಹಿಳೆಯರು ಅವರನ್ನು ಮದುವೆಯಾಗಲು ನಿರಾಕರಿಸುತ್ತಿದ್ದಾರೆ’ ಎಂದು ಹೇಳಿದ್ದಾರೆ.</p>.<p>ಇಂತಹ ಅನೇಕ ಪುರುಷರು 30 ವರ್ಷ ದಾಟಿದರೂ ಅವಿವಾಹಿತರಾಗಿಯೇ ಉಳಿದಿದ್ದಾರೆ ಎಂದು ಉಲ್ಲೇಖಿಸಿದ ಅವರು, ಪ್ರಚಲಿತ ಸಾಮಾಜಿಕ ಪ್ರವೃತ್ತಿಯಿಂದಾಗಿ ಸಂಕಷ್ಟ ಎದುರಿಸುತ್ತಿದ್ದಾರೆ ಎಂದಿದ್ದಾರೆ.</p>.<p>‘ಮುಂಬರುವ ಅಧಿವೇಶನದಲ್ಲಿ ಗ್ರಾಮಗಳಲ್ಲಿ ನೆಲೆಸಿ ಕೃಷಿಯಲ್ಲಿ ತೊಡಗಿರುವ ಪುರುಷರನ್ನು ಮದುವೆಯಾಗುವ ಮಹಿಳೆಯರಿಗೆ ವಿಶೇಷ ಭತ್ಯೆ ಮತ್ತು ವಿಶೇಷ ಸ್ಥಾನಮಾನ ಘೋಷಿಸಬೇಕೆಂದು ನಾನು ವಿನಂತಿಸುತ್ತೇನೆ’ ಎಂದು ಶಾಸಕರು ಪತ್ರದಲ್ಲಿ ಬರೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಣಿಗಲ್:</strong> ಯುವ ರೈತರು ಜೀವನ ಸಂಗಾತಿ ಹುಡುಕುವಲ್ಲಿ ಎದುರಿಸುತ್ತಿರುವ ಸಮಸ್ಯೆ ಪರಿಹರಿಸಲು ವಿಶೇಷ ಪ್ರೋತ್ಸಾಹ ಯೋಜನೆಯನ್ನು ಜಾರಿಗೆ ತರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶಾಸಕ ಎಚ್.ಡಿ.ರಂಗನಾಥ್ ಒತ್ತಾಯಿಸಿದ್ದಾರೆ.</p>.<p>ಫೆಬ್ರವರಿ 18ರಂದು ಬರೆದ ಪತ್ರದಲ್ಲಿ ಅವರು, ಮುಂಬರುವ ವಿಧಾನಸಭಾ ಅಧಿವೇಶನದಲ್ಲಿ ಈ ಕ್ರಮ ಕೈಗೊಳ್ಳುವಂತೆ ಪ್ರಸ್ತಾಪಿಸಿದ್ದಾರೆ.</p>.<p>‘ನನ್ನ ಕ್ಷೇತ್ರವಾದ ಕುಣಿಗಲ್ ತಾಲೂಕು ಪ್ರಧಾನವಾಗಿ ಗ್ರಾಮೀಣ ಪ್ರದೇಶ. ಕೃಷಿ ಮೇಲೆ ಹೆಚ್ಚು ಅವಲಂಬಿತವಾಗಿದೆ. ಹೆಚ್ಚಿನ ಸಂಖ್ಯೆ ಯುವಕರು ಹಳ್ಳಿಗಳಲ್ಲಿ ವಾಸಿಸುತ್ತಾ ಕೃಷಿ ಮೂಲಕ ಜೀವನೋಪಾಯ ಕಂಡುಕೊಂಡಿದ್ದಾರೆ. ಆದರೆ, ಅನೇಕ ಮಹಿಳೆಯರು ಅವರನ್ನು ಮದುವೆಯಾಗಲು ನಿರಾಕರಿಸುತ್ತಿದ್ದಾರೆ’ ಎಂದು ಹೇಳಿದ್ದಾರೆ.</p>.<p>ಇಂತಹ ಅನೇಕ ಪುರುಷರು 30 ವರ್ಷ ದಾಟಿದರೂ ಅವಿವಾಹಿತರಾಗಿಯೇ ಉಳಿದಿದ್ದಾರೆ ಎಂದು ಉಲ್ಲೇಖಿಸಿದ ಅವರು, ಪ್ರಚಲಿತ ಸಾಮಾಜಿಕ ಪ್ರವೃತ್ತಿಯಿಂದಾಗಿ ಸಂಕಷ್ಟ ಎದುರಿಸುತ್ತಿದ್ದಾರೆ ಎಂದಿದ್ದಾರೆ.</p>.<p>‘ಮುಂಬರುವ ಅಧಿವೇಶನದಲ್ಲಿ ಗ್ರಾಮಗಳಲ್ಲಿ ನೆಲೆಸಿ ಕೃಷಿಯಲ್ಲಿ ತೊಡಗಿರುವ ಪುರುಷರನ್ನು ಮದುವೆಯಾಗುವ ಮಹಿಳೆಯರಿಗೆ ವಿಶೇಷ ಭತ್ಯೆ ಮತ್ತು ವಿಶೇಷ ಸ್ಥಾನಮಾನ ಘೋಷಿಸಬೇಕೆಂದು ನಾನು ವಿನಂತಿಸುತ್ತೇನೆ’ ಎಂದು ಶಾಸಕರು ಪತ್ರದಲ್ಲಿ ಬರೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>