ತಾಲ್ಲೂಕಿನ ಹುತ್ರಿದುರ್ಗ ಹೋಬಳಿಯ ಆಲ್ಕೆರೆ ಗ್ರಾಮದ ಸಿದ್ದಲಿಂಗೇಶ್ವರ ಮಠದ 18.30 ಎಕರೆ ಜಮೀನಿನಲ್ಲಿ ಸ್ವಲ್ಪ ಭಾಗ ಒತ್ತುವರಿಯಾಗಿದ್ದು, ಭಾನುವಾರ ಮಠದ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ಒತ್ತುವರಿ ತೆರವುಗೊಳಿಸುವ ಸಮಯದಲ್ಲಿ, ಆಲ್ಕೆರೆ ಗ್ರಾಮದ ಶಿವಣ್ಣ, ಗಂಗಾಧರ್, ಕೆಂಪಯ್ಯ, ನಾರಾಯಣ್, ರಂಗಮ್ಮ ರಾಮಣ್ಣ, ರಂಗಸ್ವಾಮಿ ಮತ್ತು ರಾಮಕೃಷ್ಣ ಅವರು ಆಕ್ಷೇಪ ವ್ಯಕ್ತಪಡಿಸಿದರು. ವಾಗ್ವಾದ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದರು.