<p><strong>ತಿಪಟೂರು:</strong> ಮಾತೃಪೂರ್ಣ ಯೋಜನೆಯಡಿ ಗರ್ಭಿಣಿ ಹಾಗೂ ಬಾಣಂತಿಯರಿಗೆ ನೀಡಲಾಗುವ ಪೌಷ್ಟಿಕ ಆಹಾರ ಕಿಟ್ ಸಮರ್ಪಕವಾಗಿ ಫಲಾನುಭವಿಗಳಿಗೆ ತಲುಪದೆ ಇರುವ ಕುರಿತು ದೂರು ಬಂದ ಕಾರಣ ಇಒ ಕಿಟ್ ವಿತರಣೆಗೆ ಸಂಬಂಧಿಸಿದಂತೆ ವಿಶೇಷ ಆದೇಶ ಹೊರಡಿಸಿದ್ದಾರೆ.</p>.<p>ಕಿಟ್ ವಿತರಣೆ ಮಾಡುವ ಸಂದರ್ಭದಲ್ಲಿ ಪಿಡಿಒ ಹಾಗೂ ಸ್ಥಳೀಯ ಚುನಾಯಿತ ಜನಪ್ರತಿನಿಧಿಗಳ ಸಮ್ಮುಖದಲ್ಲಿಯೇ ಕಡ್ಡಾಯವಾಗಿ ವಿತರಣೆ ಮಾಡಬೇಕು ಎಂದು ಸೂಚಿಸಲಾಗಿದೆ.</p>.<p>ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳ ಸೂಚನಾ ಫಲಕದಲ್ಲಿ ಯಾವ ಗರ್ಭಿಣಿ ಹಾಗೂ ಬಾಣಂತಿಗೆ ಕಿಟ್ ನೀಡಲಾಗಿದೆ ಎಂಬ ಮಾಹಿತಿಯನ್ನು ಕಡ್ಡಾಯವಾಗಿ ಪ್ರದರ್ಶಿಸುವಂತೆ ನಿರ್ದೇಶನ ನೀಡಲಾಗಿದೆ.</p>.<p>ತಿಪಟೂರು ಇಒ ಎಚ್.ಎಂ.ಸುದರ್ಶನ್ ಮಾತನಾಡಿ, ಗ್ರಾಮಾಂತರ ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿ ಹಾಗೂ ಬಾಣಂತಿಯರಿಗೆ ಸರಿಯಾಗಿ ಕಿಟ್ ವಿತರಣೆ ಆಗುತ್ತಿಲ್ಲ ಎಂಬ ದೂರು ಬಂದಿದೆ. ಸ್ಥಳೀಯ ಭೇಟಿ ಹಾಗೂ ಮಾಸಿಕ ಸಭೆ ಸಂದರ್ಭದಲ್ಲೇ ಈ ವಿಷಯ ಗಮನಿಸಲಾಗಿದೆ. ಸರ್ಕಾರಿ ಯೋಜನೆಗಳ ಪ್ರಯೋಜನ ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವಂತೆ ಮಾಡುವುದೇ ಈ ಆದೇಶದ ಉದ್ದೇಶ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿಪಟೂರು:</strong> ಮಾತೃಪೂರ್ಣ ಯೋಜನೆಯಡಿ ಗರ್ಭಿಣಿ ಹಾಗೂ ಬಾಣಂತಿಯರಿಗೆ ನೀಡಲಾಗುವ ಪೌಷ್ಟಿಕ ಆಹಾರ ಕಿಟ್ ಸಮರ್ಪಕವಾಗಿ ಫಲಾನುಭವಿಗಳಿಗೆ ತಲುಪದೆ ಇರುವ ಕುರಿತು ದೂರು ಬಂದ ಕಾರಣ ಇಒ ಕಿಟ್ ವಿತರಣೆಗೆ ಸಂಬಂಧಿಸಿದಂತೆ ವಿಶೇಷ ಆದೇಶ ಹೊರಡಿಸಿದ್ದಾರೆ.</p>.<p>ಕಿಟ್ ವಿತರಣೆ ಮಾಡುವ ಸಂದರ್ಭದಲ್ಲಿ ಪಿಡಿಒ ಹಾಗೂ ಸ್ಥಳೀಯ ಚುನಾಯಿತ ಜನಪ್ರತಿನಿಧಿಗಳ ಸಮ್ಮುಖದಲ್ಲಿಯೇ ಕಡ್ಡಾಯವಾಗಿ ವಿತರಣೆ ಮಾಡಬೇಕು ಎಂದು ಸೂಚಿಸಲಾಗಿದೆ.</p>.<p>ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳ ಸೂಚನಾ ಫಲಕದಲ್ಲಿ ಯಾವ ಗರ್ಭಿಣಿ ಹಾಗೂ ಬಾಣಂತಿಗೆ ಕಿಟ್ ನೀಡಲಾಗಿದೆ ಎಂಬ ಮಾಹಿತಿಯನ್ನು ಕಡ್ಡಾಯವಾಗಿ ಪ್ರದರ್ಶಿಸುವಂತೆ ನಿರ್ದೇಶನ ನೀಡಲಾಗಿದೆ.</p>.<p>ತಿಪಟೂರು ಇಒ ಎಚ್.ಎಂ.ಸುದರ್ಶನ್ ಮಾತನಾಡಿ, ಗ್ರಾಮಾಂತರ ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿ ಹಾಗೂ ಬಾಣಂತಿಯರಿಗೆ ಸರಿಯಾಗಿ ಕಿಟ್ ವಿತರಣೆ ಆಗುತ್ತಿಲ್ಲ ಎಂಬ ದೂರು ಬಂದಿದೆ. ಸ್ಥಳೀಯ ಭೇಟಿ ಹಾಗೂ ಮಾಸಿಕ ಸಭೆ ಸಂದರ್ಭದಲ್ಲೇ ಈ ವಿಷಯ ಗಮನಿಸಲಾಗಿದೆ. ಸರ್ಕಾರಿ ಯೋಜನೆಗಳ ಪ್ರಯೋಜನ ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವಂತೆ ಮಾಡುವುದೇ ಈ ಆದೇಶದ ಉದ್ದೇಶ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>