<p><strong>ತಿಪಟೂರು</strong>: ನಗರದ ಕಲ್ಪತರು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಎಂಬಿಎ ವಿಭಾಗದಿಂದ 2025-26ನೇ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ನಡೆಯಿತು.</p>.<p>ತುಮಕೂರು ಇನೊವೇಷನ್, ಇಂಕ್ಯೂಬೇಶನ್ ಹಾಗೂ ಎಂಟ್ರಪ್ರೆನರ್ಷಿಪ್ ಕೌನ್ಸಿಲ್ ಸಿಇಒ ಸತೀಶ್ ಎಂ.ಭಾವನ್ಕರ್ ಮಾತನಾಡಿ, ಸ್ಪರ್ಧಾತ್ಮಕ ಯುಗದಲ್ಲಿ ಉದ್ಯೋಗಾರ್ಹತೆ ಹಾಗೂ ನಾಯಕತ್ವ ಕೌಶಲ ಮುಖ್ಯ. ಅಂಕಗಳಿಕೆಗೆ ಸೀಮಿತವಾಗದೆ, ನೈತಿಕ ಮೌಲ್ಯ ಮತ್ತು ಪ್ರಾಯೋಗಿಕ ಜ್ಞಾನದಲ್ಲೂ ಮುಂದುವರಿಯಬೇಕು ಎಂದು ಸಲಹೆ ನೀಡಿದರು</p>.<p>ಸಂಸ್ಥೆ ಖಜಾಂಚಿ ಟಿ.ಎಸ್.ಶಿವಪ್ರಸಾದ್ ಮಾತನಾಡಿ, ಸಂಸ್ಥೆಯಲ್ಲಿ ಒದಗಿಸಿರುವ ಆಧುನಿಕ ಸೌಕರ್ಯ, ತರಬೇತಿ ಕೋರ್ಸ್ಗಳು ಮತ್ತು ಇಂಕ್ಯೂಬೇಶನ್ ಲ್ಯಾಬ್ಗಳು ಇಂದಿನ ತಂತ್ರಜ್ಞಾನಾಧಾರಿತ ಶಿಕ್ಷಣದ ಅಗತ್ಯತೆಗಳನ್ನು ಪೂರೈಸುವಂತೆ ಸಂಸ್ಥೆ ನಿರಂತರವಾಗಿ ಮುಂದುವರಿಯುತ್ತಿದೆ ಎಂದರು.</p>.<p>ಸಂಸ್ಥೆ ಅಧ್ಯಕ್ಷ ಪಿ.ಕೆ.ತಿಪ್ಪೇರುದ್ರಪ್ಪ ಮಾತನಾಡಿ, ‘ಸಂಸ್ಥೆ ಗುಣಮಟ್ಟದ ಶಿಕ್ಷಣ ಹಾಗೂ ಮಾನವೀಯ ಮೌಲ್ಯಗಳಿಗೆ ಸಮನ್ವಯ ಸಾಧಿಸುತ್ತಿದೆ. ನಿಮ್ಮೆಲ್ಲರ ಯಶಸ್ಸೇ ಸಂಸ್ಥೆಯ ಸಾಧನೆ’ ಎಂದರು.</p>.<p>ಕಲ್ಪತರು ವಿದ್ಯಾಸಂಸ್ಥೆ ಉಪಾಧ್ಯಕ್ಷ ಬಿ.ಎಸ್.ಉಮೇಶ್, ಬಾಗೇಪಲ್ಲಿ ನಟರಾಜ್, ಟಿ.ಎಸ್.ಬಸವರಾಜು, ಜಿ.ಪಿ.ದೀಪಕ್, ಕಾರ್ಯದರ್ಶಿ ಜಿ.ಎಸ್.ಉಮಾಶಂಕರ್, ಎಂ.ಆರ್.ಸಂಗಮೇಶ್, ಎಚ್.ಜಿ.ಸುಧಾಕರ್, ಟಿ.ಯು.ಜಗದೀಶಮೂರ್ತಿ ಪ್ರಾಂಶುಪಾಲ ಎಚ್.ಸಿ.ಸತೀಶ್ಕುಮಾರ್, ಮಿಟ್ಟಾ ಶೇಖರ್ ಗೌಡ, ಎಂ.ಬಿ.ಎ. ವಿಭಾಗದ ಮುಖ್ಯಸ್ಥೆ ದೀಪ್ತಿ ಅಮಿತ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿಪಟೂರು</strong>: ನಗರದ ಕಲ್ಪತರು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಎಂಬಿಎ ವಿಭಾಗದಿಂದ 2025-26ನೇ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ನಡೆಯಿತು.</p>.<p>ತುಮಕೂರು ಇನೊವೇಷನ್, ಇಂಕ್ಯೂಬೇಶನ್ ಹಾಗೂ ಎಂಟ್ರಪ್ರೆನರ್ಷಿಪ್ ಕೌನ್ಸಿಲ್ ಸಿಇಒ ಸತೀಶ್ ಎಂ.ಭಾವನ್ಕರ್ ಮಾತನಾಡಿ, ಸ್ಪರ್ಧಾತ್ಮಕ ಯುಗದಲ್ಲಿ ಉದ್ಯೋಗಾರ್ಹತೆ ಹಾಗೂ ನಾಯಕತ್ವ ಕೌಶಲ ಮುಖ್ಯ. ಅಂಕಗಳಿಕೆಗೆ ಸೀಮಿತವಾಗದೆ, ನೈತಿಕ ಮೌಲ್ಯ ಮತ್ತು ಪ್ರಾಯೋಗಿಕ ಜ್ಞಾನದಲ್ಲೂ ಮುಂದುವರಿಯಬೇಕು ಎಂದು ಸಲಹೆ ನೀಡಿದರು</p>.<p>ಸಂಸ್ಥೆ ಖಜಾಂಚಿ ಟಿ.ಎಸ್.ಶಿವಪ್ರಸಾದ್ ಮಾತನಾಡಿ, ಸಂಸ್ಥೆಯಲ್ಲಿ ಒದಗಿಸಿರುವ ಆಧುನಿಕ ಸೌಕರ್ಯ, ತರಬೇತಿ ಕೋರ್ಸ್ಗಳು ಮತ್ತು ಇಂಕ್ಯೂಬೇಶನ್ ಲ್ಯಾಬ್ಗಳು ಇಂದಿನ ತಂತ್ರಜ್ಞಾನಾಧಾರಿತ ಶಿಕ್ಷಣದ ಅಗತ್ಯತೆಗಳನ್ನು ಪೂರೈಸುವಂತೆ ಸಂಸ್ಥೆ ನಿರಂತರವಾಗಿ ಮುಂದುವರಿಯುತ್ತಿದೆ ಎಂದರು.</p>.<p>ಸಂಸ್ಥೆ ಅಧ್ಯಕ್ಷ ಪಿ.ಕೆ.ತಿಪ್ಪೇರುದ್ರಪ್ಪ ಮಾತನಾಡಿ, ‘ಸಂಸ್ಥೆ ಗುಣಮಟ್ಟದ ಶಿಕ್ಷಣ ಹಾಗೂ ಮಾನವೀಯ ಮೌಲ್ಯಗಳಿಗೆ ಸಮನ್ವಯ ಸಾಧಿಸುತ್ತಿದೆ. ನಿಮ್ಮೆಲ್ಲರ ಯಶಸ್ಸೇ ಸಂಸ್ಥೆಯ ಸಾಧನೆ’ ಎಂದರು.</p>.<p>ಕಲ್ಪತರು ವಿದ್ಯಾಸಂಸ್ಥೆ ಉಪಾಧ್ಯಕ್ಷ ಬಿ.ಎಸ್.ಉಮೇಶ್, ಬಾಗೇಪಲ್ಲಿ ನಟರಾಜ್, ಟಿ.ಎಸ್.ಬಸವರಾಜು, ಜಿ.ಪಿ.ದೀಪಕ್, ಕಾರ್ಯದರ್ಶಿ ಜಿ.ಎಸ್.ಉಮಾಶಂಕರ್, ಎಂ.ಆರ್.ಸಂಗಮೇಶ್, ಎಚ್.ಜಿ.ಸುಧಾಕರ್, ಟಿ.ಯು.ಜಗದೀಶಮೂರ್ತಿ ಪ್ರಾಂಶುಪಾಲ ಎಚ್.ಸಿ.ಸತೀಶ್ಕುಮಾರ್, ಮಿಟ್ಟಾ ಶೇಖರ್ ಗೌಡ, ಎಂ.ಬಿ.ಎ. ವಿಭಾಗದ ಮುಖ್ಯಸ್ಥೆ ದೀಪ್ತಿ ಅಮಿತ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>