<p><strong>ತುಮಕೂರು</strong>: ನಗರದ ಎಂಪ್ರೆಸ್ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಿಗೆ ಜುಲೈ 2ರಿಂದ ಮಧ್ಯಾಹ್ನದ ಬಿಸಿಯೂಟ ಸಿಗಲಿದೆ.</p>.<p>ವಿ.ವಿ ಕಲಾ ಕಾಲೇಜು, ಸರ್ಕಾರಿ ಪದವಿ ಪೂರ್ವ ಕಾಲೇಜು, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ನಂತರ ಇದೀಗ ಎಂಪ್ರೆಸ್ ಕಾಲೇಜಿಗೂ ಬಿಸಿಯೂಟ ಕಾರ್ಯಕ್ರಮ ವಿಸ್ತರಿಸಲಾಗಿದೆ.</p>.<p>ಕಲ್ಪಾಮೃತ ಟ್ರಸ್ಟ್, ರಾಮಕೃಷ್ಣ ಸೇವಾಶ್ರಮ, ಅಮೃತ ಆಹಾರದ ವತಿಯಿಂದ ‘ಪೌಷ್ಟಿಕಾಮೃತ’ ಯೋಜನೆಯಡಿ ಎಂಪ್ರೆಸ್ ಕಾಲೇಜಿನ ಒಂದು ಸಾವಿರ ವಿದ್ಯಾರ್ಥಿನಿಯರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ’ ಎಂದು ಪಾವಗಡ ರಾಮಕೃಷ್ಣ ಸೇವಾಶ್ರಮದ ಸ್ವಾಮಿ ಜಪಾನಂದ ಇಲ್ಲಿ ಸೋಮವಾರ ಹೇಳಿದರು.</p>.<p>ಗ್ರಾಮೀಣ ಭಾಗದ ವಿದ್ಯಾರ್ಥಿನಿಯರು ಬೆಳಗಿನ ಉಪಾಹಾರ ಸೇವಿಸದೆ ಕಾಲೇಜಿಗೆ ಬರುತ್ತಿದ್ದಾರೆ. ಇದರಿಂದ ಅಪೌಷ್ಟಿಕತೆಗೆ ತುತ್ತಾಗುತ್ತಾರೆ. ಇದು ಶೈಕ್ಷಣಿಕ ಪ್ರಗತಿಯ ಮೇಲೂ ಪರಿಣಾಮ ಬೀರುತ್ತದೆ. ಇದನ್ನು ಅರಿತು ಬಿಸಿಯೂಟ ನೀಡಲಾಗುತ್ತದೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ವಿತರಣಾ ಯೋಜನೆ ಜಾರಿಗೊಳಿಸಲಾಗಿದೆ ಎಂದರು.</p>.<p>ಕಲ್ಪಾಮೃತ ಟ್ರಸ್ಟ್ ಅಧ್ಯಕ್ಷ ಟಿ.ಎನ್.ಮಧುಕರ್, ಉಪಾಧ್ಯಕ್ಷೆ ಅಂಬಿಕಾ, ಕಾರ್ಯದರ್ಶಿ ಬಿ.ಆರ್.ಉಮೇಶ್, ಖಜಾಂಚಿ ಸ್ಫೂರ್ತಿ ಚಿದಾನಂದ್, ಟಸ್ಟ್ರಿ ಬಿ.ಎನ್.ಪ್ರಶಾಂತ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ನಗರದ ಎಂಪ್ರೆಸ್ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಿಗೆ ಜುಲೈ 2ರಿಂದ ಮಧ್ಯಾಹ್ನದ ಬಿಸಿಯೂಟ ಸಿಗಲಿದೆ.</p>.<p>ವಿ.ವಿ ಕಲಾ ಕಾಲೇಜು, ಸರ್ಕಾರಿ ಪದವಿ ಪೂರ್ವ ಕಾಲೇಜು, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ನಂತರ ಇದೀಗ ಎಂಪ್ರೆಸ್ ಕಾಲೇಜಿಗೂ ಬಿಸಿಯೂಟ ಕಾರ್ಯಕ್ರಮ ವಿಸ್ತರಿಸಲಾಗಿದೆ.</p>.<p>ಕಲ್ಪಾಮೃತ ಟ್ರಸ್ಟ್, ರಾಮಕೃಷ್ಣ ಸೇವಾಶ್ರಮ, ಅಮೃತ ಆಹಾರದ ವತಿಯಿಂದ ‘ಪೌಷ್ಟಿಕಾಮೃತ’ ಯೋಜನೆಯಡಿ ಎಂಪ್ರೆಸ್ ಕಾಲೇಜಿನ ಒಂದು ಸಾವಿರ ವಿದ್ಯಾರ್ಥಿನಿಯರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ’ ಎಂದು ಪಾವಗಡ ರಾಮಕೃಷ್ಣ ಸೇವಾಶ್ರಮದ ಸ್ವಾಮಿ ಜಪಾನಂದ ಇಲ್ಲಿ ಸೋಮವಾರ ಹೇಳಿದರು.</p>.<p>ಗ್ರಾಮೀಣ ಭಾಗದ ವಿದ್ಯಾರ್ಥಿನಿಯರು ಬೆಳಗಿನ ಉಪಾಹಾರ ಸೇವಿಸದೆ ಕಾಲೇಜಿಗೆ ಬರುತ್ತಿದ್ದಾರೆ. ಇದರಿಂದ ಅಪೌಷ್ಟಿಕತೆಗೆ ತುತ್ತಾಗುತ್ತಾರೆ. ಇದು ಶೈಕ್ಷಣಿಕ ಪ್ರಗತಿಯ ಮೇಲೂ ಪರಿಣಾಮ ಬೀರುತ್ತದೆ. ಇದನ್ನು ಅರಿತು ಬಿಸಿಯೂಟ ನೀಡಲಾಗುತ್ತದೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ವಿತರಣಾ ಯೋಜನೆ ಜಾರಿಗೊಳಿಸಲಾಗಿದೆ ಎಂದರು.</p>.<p>ಕಲ್ಪಾಮೃತ ಟ್ರಸ್ಟ್ ಅಧ್ಯಕ್ಷ ಟಿ.ಎನ್.ಮಧುಕರ್, ಉಪಾಧ್ಯಕ್ಷೆ ಅಂಬಿಕಾ, ಕಾರ್ಯದರ್ಶಿ ಬಿ.ಆರ್.ಉಮೇಶ್, ಖಜಾಂಚಿ ಸ್ಫೂರ್ತಿ ಚಿದಾನಂದ್, ಟಸ್ಟ್ರಿ ಬಿ.ಎನ್.ಪ್ರಶಾಂತ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>