ತುಮಕೂರು: ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಹಾಗೂ ತುಮಕೂರು ಮಹಾನಗರ ಪಾಲಿಕೆಯಿಂದ ಮಾಂಸವನ್ನು ಮನೆ ಬಾಗಿಲಿಗೆ ತಲುಪಿಸುವ ಸಂಚಾರಿ ಮಾರಾಟ ಮಳಿಗೆಗೆ ಕುವೆಂಪು ನಗರದಲ್ಲಿ ಭಾನುವಾರ ಚಾಲನೆ ನೀಡಲಾಯಿತು.
ಗ್ರಾಹಕರು ಖರೀದಿಗೆ ಒಂದು ದಿನ ಮುಂಚಿತವಾಗಿ ಸಂಪರ್ಕಿಸಬೇಕು. ಭಾನುವಾರ ಮತ್ತು ಮಂಗಳವಾರ ಮಾತ್ರ ಮಾಂಸ ಮಾರಾಟ ಮಾಡಲಾಗುತ್ತದೆ. ಪ್ರತಿ ಕೆ.ಜಿ. ಕುರಿ ಮಾಂಸಕ್ಕೆ ₹650 ನಿಗದಿ ಮಾಡಲಾಗಿದೆ.
ಸಂಚಾರಿ ಮಳಿಗೆಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಪಾಲಿಕೆ ಆಯುಕ್ತ ಟಿ.ಭೂಬಾಲನ್, ನಿಗಮದ ಉಪನಿರ್ದೇಶಕ ಜಿ.ಎಂ.ನಾಗರಾಜ್, ಪಾಲಿಕೆ ಆರೋಗ್ಯ ಅಧಿಕಾರಿ ಡಾ.ನಾಗೇಶ್ ಕುಮಾರ್ ಇದ್ದರು.