ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತ್ಯತೀತತೆ ಬಗ್ಗೆ ಕೇವಲ ಭಾಷಣ ಮಾಡುತ್ತಾರೆ. ಆದರೆ, ಅದನ್ನು ಜಾರಿಗೆ ತಂದಿಲ್ಲ. ಈವರೆಗೆ ಅವರು ಎಷ್ಟು ಮುಸ್ಲಿಮರನ್ನು ಶಾಸಕ, ಸಂಸದರನ್ನಾಗಿ ಮಾಡಿದ್ದಾರೆ ಉತ್ತರಿಸಲಿ. ಅವರು ಪರಿಶಿಷ್ಟ ಜಾತಿ, ಪಂಗಡದವರು ಹಾಗೂ ಗಿರಿಜನರಿಗೆ ಮೀಸಲಿಟ್ಟಿದ್ದ ಅನುದಾನದಲ್ಲಿ ಶೇ 40ರಷ್ಟನ್ನೂ ಖರ್ಚು ಮಾಡಿಲ್ಲ ಎಂದು ಟೀಕಿಸಿದರು.