ಬೆಲ್ಲದಹಳ್ಳಿ ಚಿಕ್ಕತಿಮ್ಮಯ್ಯ ಮಾತನಾಡಿ, ‘ಪಾವಗಡದಲ್ಲಿ ವ್ಯವಸಾಯಕ್ಕೆ ಯೋಗ್ಯವಲ್ಲದ ಬಂಜರು ಭೂಮಿಯು ಇದ್ದುದರಿಂದ ಗುತ್ತಿಗೆ ಆಧಾರದ ಮೇಲೆ ರೈತರಿಂದ ಪಡೆದು ಸೋಲಾರ್ ಪಾರ್ಕ್ ಸ್ಥಾಪಿಸಲಾಗಿದೆ. ಆದರೆ, ಭೈರಗೊಂಡ್ಲು ಸುತ್ತಮುತ್ತಲಿನ ಪ್ರದೇಶದಲ್ಲಿ ರೇಷ್ಮೆ, ಅಡಿಕೆ ಮತ್ತು ತೆಂಗು ಸೇರಿದಂತೆ ಹಲವು ಬಗೆಯ ತೋಟಗಾರಿಕೆ ಬೆಳೆ ಇರುವ ಪ್ರದೇಶವಾಗಿದೆ’ ಎಂದು ವಿವರಿಸಿದರು.