<p>ಮಧುಗಿರಿ: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಶುಕ್ರವಾರ ಸಂಜೆ ಸುರಿದ ಮಳೆಯಿಂದಾಗಿ ಜಮೀನು ಹಾಗೂ ತಗ್ಗು ಪ್ರದೇಶಗಳಲ್ಲಿ ನೀರು ಹರಿದಿದೆ.</p>.<p>ವರಮಹಾಲಕ್ಷ್ಮಿ ಹಬ್ಬದ ದಿನದಂದು ಸಂಜೆ ಸುರಿದ ಮಳೆಗೆ ಭೂಮಿ ಸಂಪೂರ್ಣ ತೇವಾಂಶವಾಗಿ ಕಾಲುವೆ, ಹಳ್ಳ ಹಾಗೂ ಕೆರೆಗಳಿಗೆ ನೀರು ಹರಿದಿದೆ.</p>.<p>ಪಟ್ಟಣದ ಮಹಾತ್ಮಗಾಂಧಿ ಬಡಾವಣೆ, ಕೆ.ಆರ್.ಬಡಾವಣೆ, ಪಿಎಲ್ಡಿ ಬ್ಯಾಂಕ್ ರಸ್ತೆ, ಕರಡಿಪುರ ಸೇರಿದಂತೆ ಹಲವು ಬಡಾವಣೆಯ ಮನೆಗಳಿಗೆ ಚರಂಡಿ ನೀರು ನುಗ್ಗಿದೆ. ಚರಂಡಿಗಳಲ್ಲಿ ನೀರು ತುಂಬಿ ರಸ್ತೆ ಮೇಲೆ ಹರಿದ್ದರಿಂದ ಪಾದಚಾರಿ ಹಾಗೂ ವಾಹನ ಸವಾರರಿಗೆ ಸಾಕಷ್ಟು ತೊಂದರೆಯಾಯಿತು.</p>.<p>ಮಳೆ ಬಂದು ಹಲವು ದಿನಗಳು ಕಳೆದಿದ್ದವು. ಈ ಮಳೆಯಿಂದಾಗಿಶೇಂಗಾ, ಅವರೆ, ಅಲಸಂದೆ, ರಾಗಿ ಸೇರಿದಂತೆ<br />ಹಲವು ಬೆಳೆಗಳಿಗೆ ಜೀವ ಕಳೆ ಬಂದಂತಾಗಿದೆ.</p>.<p class="Briefhead">ಹುಳಿಯಾರು:<br />ಹದ ಮಳೆ</p>.<p>ಹುಳಿಯಾರು: ಪಟ್ಟಣ ಸೇರಿದಂತೆ ಹೋಬಳಿ ವ್ಯಾಪ್ತಿಯ ಕೆಲ ಗ್ರಾಮಗಳಲ್ಲಿ ಶುಕ್ರವಾರ ಸಂಜೆ ಹದ ಮಳೆಯಾಗಿದೆ.</p>.<p>ಬೆಳಿಗ್ಗೆಯಿಂದ ಬಿಸಿಲ ಝಳ ಹೆಚ್ಚಾಗಿದ್ದು, ಸಂಜೆ ವೇಳೆ ಮಳೆ ಬಂದು ತಂಪೆರೆಯಿತು. ಯಳನಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಮ್ಮಡಿಹಳ್ಳಿ ಸುತ್ತ ಮುತ್ತ ಒಂದು ಗಂಟೆಗೂ ಹೆಚ್ಚು ಕಾಲ ಮಳೆ ಬಂತು.</p>.<p>ಇದರಿಂದ ತಗ್ಗು ಪ್ರದೇಶಗಳಿಗೆ ನೀರು ಹರಿಯಿತು. ಕೆಲ ಕಡೆ ತೆಂಗಿನ ತೋಟಗಳಲ್ಲಿ ನೀರು ಶೇಖರಣೆಯಾಗಿತ್ತು. ಉಳಿದಂತೆ ದಸೂಡಿ, ಗಾಣಧಾಳು, ಕೆಂಕೆರೆ, ಹುಳಿಯಾರು ಪಟ್ಟಣದ ಸುತ್ತಮುತ್ತ ಹದ ಮಳೆಯಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಧುಗಿರಿ: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಶುಕ್ರವಾರ ಸಂಜೆ ಸುರಿದ ಮಳೆಯಿಂದಾಗಿ ಜಮೀನು ಹಾಗೂ ತಗ್ಗು ಪ್ರದೇಶಗಳಲ್ಲಿ ನೀರು ಹರಿದಿದೆ.</p>.<p>ವರಮಹಾಲಕ್ಷ್ಮಿ ಹಬ್ಬದ ದಿನದಂದು ಸಂಜೆ ಸುರಿದ ಮಳೆಗೆ ಭೂಮಿ ಸಂಪೂರ್ಣ ತೇವಾಂಶವಾಗಿ ಕಾಲುವೆ, ಹಳ್ಳ ಹಾಗೂ ಕೆರೆಗಳಿಗೆ ನೀರು ಹರಿದಿದೆ.</p>.<p>ಪಟ್ಟಣದ ಮಹಾತ್ಮಗಾಂಧಿ ಬಡಾವಣೆ, ಕೆ.ಆರ್.ಬಡಾವಣೆ, ಪಿಎಲ್ಡಿ ಬ್ಯಾಂಕ್ ರಸ್ತೆ, ಕರಡಿಪುರ ಸೇರಿದಂತೆ ಹಲವು ಬಡಾವಣೆಯ ಮನೆಗಳಿಗೆ ಚರಂಡಿ ನೀರು ನುಗ್ಗಿದೆ. ಚರಂಡಿಗಳಲ್ಲಿ ನೀರು ತುಂಬಿ ರಸ್ತೆ ಮೇಲೆ ಹರಿದ್ದರಿಂದ ಪಾದಚಾರಿ ಹಾಗೂ ವಾಹನ ಸವಾರರಿಗೆ ಸಾಕಷ್ಟು ತೊಂದರೆಯಾಯಿತು.</p>.<p>ಮಳೆ ಬಂದು ಹಲವು ದಿನಗಳು ಕಳೆದಿದ್ದವು. ಈ ಮಳೆಯಿಂದಾಗಿಶೇಂಗಾ, ಅವರೆ, ಅಲಸಂದೆ, ರಾಗಿ ಸೇರಿದಂತೆ<br />ಹಲವು ಬೆಳೆಗಳಿಗೆ ಜೀವ ಕಳೆ ಬಂದಂತಾಗಿದೆ.</p>.<p class="Briefhead">ಹುಳಿಯಾರು:<br />ಹದ ಮಳೆ</p>.<p>ಹುಳಿಯಾರು: ಪಟ್ಟಣ ಸೇರಿದಂತೆ ಹೋಬಳಿ ವ್ಯಾಪ್ತಿಯ ಕೆಲ ಗ್ರಾಮಗಳಲ್ಲಿ ಶುಕ್ರವಾರ ಸಂಜೆ ಹದ ಮಳೆಯಾಗಿದೆ.</p>.<p>ಬೆಳಿಗ್ಗೆಯಿಂದ ಬಿಸಿಲ ಝಳ ಹೆಚ್ಚಾಗಿದ್ದು, ಸಂಜೆ ವೇಳೆ ಮಳೆ ಬಂದು ತಂಪೆರೆಯಿತು. ಯಳನಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಮ್ಮಡಿಹಳ್ಳಿ ಸುತ್ತ ಮುತ್ತ ಒಂದು ಗಂಟೆಗೂ ಹೆಚ್ಚು ಕಾಲ ಮಳೆ ಬಂತು.</p>.<p>ಇದರಿಂದ ತಗ್ಗು ಪ್ರದೇಶಗಳಿಗೆ ನೀರು ಹರಿಯಿತು. ಕೆಲ ಕಡೆ ತೆಂಗಿನ ತೋಟಗಳಲ್ಲಿ ನೀರು ಶೇಖರಣೆಯಾಗಿತ್ತು. ಉಳಿದಂತೆ ದಸೂಡಿ, ಗಾಣಧಾಳು, ಕೆಂಕೆರೆ, ಹುಳಿಯಾರು ಪಟ್ಟಣದ ಸುತ್ತಮುತ್ತ ಹದ ಮಳೆಯಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>