<p><strong>ತುಮಕೂರು: </strong>ಪಾಲಿಕೆ ವ್ಯಾಪ್ತಿಯ ಬೀದಿಬದಿ ವ್ಯಾಪಾರಿಗಳಿಗೆ ಪುನರ್ವಸತಿ ಕಲ್ಪಿಸದೆ ಒಕ್ಕಲೆಬ್ಬಿಸಬಾರದು. ಶಾಶ್ವತ ನೆಲೆಯಾಗಿ ಮಾರಾಟ ವಲಯ ನಿರ್ಮಿಸಬೇಕು ಎಂದು ಒತ್ತಾಯಿಸಿ ಜಿಲ್ಲಾ ಫುಟ್ಪಾತ್ ವ್ಯಾಪಾರಿಗಳ ಸಂಘ ಸಿಐಟಿಯು ನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.</p>.<p>ಈ ವೇಳೆ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ಕುಮಾರ್ ಪ್ರತಿಕ್ರಿಯಿಸಿ, ‘ಬೀದಿಬದಿ ವ್ಯಾಪಾರಿಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ಸಂಬಂಧ ಸಭೆ ಕರೆಯಲಾಗುವುದು. ವೆಂಡಿಂಗ್ ಜೋನ್ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು. ಎಂ.ಜಿ.ರಸ್ತೆ ವ್ಯಾಪಾರಿ<br />ಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುವುದು’ ಎಂದರು.</p>.<p>ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಎನ್.ಕೆ.ಸುಬ್ರಮಣ್ಯ, ‘ನಿಯಮಾವಳಿಗಳಂತೆ ಬೀದಿಬದಿ ವ್ಯಾಪಾರಿಗಳಿಗೆ ವ್ಯಾಪಾರ ಮಾಡುವ ಮತ್ತು ಬದುಕುವ ಹಕ್ಕು ನೀಡಲಾಗಿದೆ. ವ್ಯಾಪಾರ ಮಾಡುತ್ತಿರುವ ಸ್ಥಳ ಗುರುತಿಸಿ ಗುರುತಿನ ಚೀಟಿ ನೀಡುವ ಜವಾಬ್ದಾರಿಯನ್ನು ಮಹಾನಗರ ಪಾಲಿಕೆಗೆ ನೀಡಲಾಗಿದೆ’ ಎಂದರು.</p>.<p>ಕೆಲವೆಡೆ ಗುರುತಿನ ಚೀಟಿ ನೀಡಿದ್ದರೂ ನವೀಕರಿಸಿಲ್ಲ. ಗುರುತಿನ ಚೀಟಿ ಇರುವ ಫುಟ್ಪಾತ್ ವ್ಯಾಪಾರಿಗಳಿಗೆ ಪುನರ್ ವಸತಿ ಕಲ್ಪಿಸದೆ ದೌರ್ಜನ್ಯದಿಂದ ಒಕ್ಕಲೆಬ್ಬಿಸಲಾಗುತ್ತಿದೆ. ಸೂಕ್ತ ಪರ್ಯಾಯ ವ್ಯವಸ್ಥೆ ಮಾಡಬೇಕು’ ಎಂದು ಆಗ್ರಹಿಸಿದರು.</p>.<p>ವೆಂಡಿಂಗ್ ಸಮಿತಿ ಸದಸ್ಯ ವಸೀಂ ಅಕ್ರಂ, ‘ಪಟ್ಟಣ ವ್ಯಾಪಾರಿಗಳ ಸಮಿತಿ ಸಭೆಯನ್ನು ಪ್ರತಿ ತಿಂಗಳು ಕಡ್ಡಾಯವಾಗಿ ಕರೆಯಬೇಕು. ವ್ಯಾಪಾರಿಗಳಿಗೆ ಪೊಲೀಸರು ಕಿರುಕುಳ ನೀಡುವುದನ್ನು ತಡೆಗಟ್ಟಬೇಕು’ ಎಂದರು.</p>.<p>ಪಟ್ಟಣ ವ್ಯಾಪಾರಿಗಳ ಸಮಿತಿ ಸದಸ್ಯ ಜಿ.ಜಗದೀಶ್, ‘ನಗರದ ಬೆಳವಣಿಗೆಯಿಂದಾಗಿ ನಗರದ ಎಂಟು ದಿಕ್ಕುಗಳಲ್ಲಿ ಬೀದಿಬದಿ ವ್ಯಾಪಾರಿಗಳ ವಲಯಗಳ ನಿರ್ಮಾಣಕ್ಕೆ ಸ್ಮಾರ್ಟ್ಸಿಟಿಯಿಂದ ಕನಿಷ್ಠ ₹15 ಕೋಟಿ ಮೀಸಲಿಡಬೇಕು’ ಎಂದು ಮನವಿ ಮಾಡಿದರು.</p>.<p>ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷ ಸೈಯದ್ ಮುಜೀಬ್, ಪಟ್ಟಣ ವ್ಯಾಪಾರಿಗಳ ಸಮಿತಿ ಸದಸ್ಯ ಎನ್.ಮುತ್ತುರಾಜ್, ರವಿಕುಮಾರ್, ಕೃಷ್ಣಮೂರ್ತಿ, ಚಾಂದ್ಪಾಷ, ವಿಶ್ವಪ್ರಭಾ, ತಬ್ರೇಜ್ಪಾಷ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ಪಾಲಿಕೆ ವ್ಯಾಪ್ತಿಯ ಬೀದಿಬದಿ ವ್ಯಾಪಾರಿಗಳಿಗೆ ಪುನರ್ವಸತಿ ಕಲ್ಪಿಸದೆ ಒಕ್ಕಲೆಬ್ಬಿಸಬಾರದು. ಶಾಶ್ವತ ನೆಲೆಯಾಗಿ ಮಾರಾಟ ವಲಯ ನಿರ್ಮಿಸಬೇಕು ಎಂದು ಒತ್ತಾಯಿಸಿ ಜಿಲ್ಲಾ ಫುಟ್ಪಾತ್ ವ್ಯಾಪಾರಿಗಳ ಸಂಘ ಸಿಐಟಿಯು ನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.</p>.<p>ಈ ವೇಳೆ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ಕುಮಾರ್ ಪ್ರತಿಕ್ರಿಯಿಸಿ, ‘ಬೀದಿಬದಿ ವ್ಯಾಪಾರಿಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ಸಂಬಂಧ ಸಭೆ ಕರೆಯಲಾಗುವುದು. ವೆಂಡಿಂಗ್ ಜೋನ್ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು. ಎಂ.ಜಿ.ರಸ್ತೆ ವ್ಯಾಪಾರಿ<br />ಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುವುದು’ ಎಂದರು.</p>.<p>ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಎನ್.ಕೆ.ಸುಬ್ರಮಣ್ಯ, ‘ನಿಯಮಾವಳಿಗಳಂತೆ ಬೀದಿಬದಿ ವ್ಯಾಪಾರಿಗಳಿಗೆ ವ್ಯಾಪಾರ ಮಾಡುವ ಮತ್ತು ಬದುಕುವ ಹಕ್ಕು ನೀಡಲಾಗಿದೆ. ವ್ಯಾಪಾರ ಮಾಡುತ್ತಿರುವ ಸ್ಥಳ ಗುರುತಿಸಿ ಗುರುತಿನ ಚೀಟಿ ನೀಡುವ ಜವಾಬ್ದಾರಿಯನ್ನು ಮಹಾನಗರ ಪಾಲಿಕೆಗೆ ನೀಡಲಾಗಿದೆ’ ಎಂದರು.</p>.<p>ಕೆಲವೆಡೆ ಗುರುತಿನ ಚೀಟಿ ನೀಡಿದ್ದರೂ ನವೀಕರಿಸಿಲ್ಲ. ಗುರುತಿನ ಚೀಟಿ ಇರುವ ಫುಟ್ಪಾತ್ ವ್ಯಾಪಾರಿಗಳಿಗೆ ಪುನರ್ ವಸತಿ ಕಲ್ಪಿಸದೆ ದೌರ್ಜನ್ಯದಿಂದ ಒಕ್ಕಲೆಬ್ಬಿಸಲಾಗುತ್ತಿದೆ. ಸೂಕ್ತ ಪರ್ಯಾಯ ವ್ಯವಸ್ಥೆ ಮಾಡಬೇಕು’ ಎಂದು ಆಗ್ರಹಿಸಿದರು.</p>.<p>ವೆಂಡಿಂಗ್ ಸಮಿತಿ ಸದಸ್ಯ ವಸೀಂ ಅಕ್ರಂ, ‘ಪಟ್ಟಣ ವ್ಯಾಪಾರಿಗಳ ಸಮಿತಿ ಸಭೆಯನ್ನು ಪ್ರತಿ ತಿಂಗಳು ಕಡ್ಡಾಯವಾಗಿ ಕರೆಯಬೇಕು. ವ್ಯಾಪಾರಿಗಳಿಗೆ ಪೊಲೀಸರು ಕಿರುಕುಳ ನೀಡುವುದನ್ನು ತಡೆಗಟ್ಟಬೇಕು’ ಎಂದರು.</p>.<p>ಪಟ್ಟಣ ವ್ಯಾಪಾರಿಗಳ ಸಮಿತಿ ಸದಸ್ಯ ಜಿ.ಜಗದೀಶ್, ‘ನಗರದ ಬೆಳವಣಿಗೆಯಿಂದಾಗಿ ನಗರದ ಎಂಟು ದಿಕ್ಕುಗಳಲ್ಲಿ ಬೀದಿಬದಿ ವ್ಯಾಪಾರಿಗಳ ವಲಯಗಳ ನಿರ್ಮಾಣಕ್ಕೆ ಸ್ಮಾರ್ಟ್ಸಿಟಿಯಿಂದ ಕನಿಷ್ಠ ₹15 ಕೋಟಿ ಮೀಸಲಿಡಬೇಕು’ ಎಂದು ಮನವಿ ಮಾಡಿದರು.</p>.<p>ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷ ಸೈಯದ್ ಮುಜೀಬ್, ಪಟ್ಟಣ ವ್ಯಾಪಾರಿಗಳ ಸಮಿತಿ ಸದಸ್ಯ ಎನ್.ಮುತ್ತುರಾಜ್, ರವಿಕುಮಾರ್, ಕೃಷ್ಣಮೂರ್ತಿ, ಚಾಂದ್ಪಾಷ, ವಿಶ್ವಪ್ರಭಾ, ತಬ್ರೇಜ್ಪಾಷ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>