ಸ್ಮಾರ್ಟ್ ಸಿಟಿ ಯೋಜನೆಯಿಂದ ಇಡೀ ನಗರಕ್ಕೆ ಅನುಕೂಲವಾಗಿಲ್ಲ. ಅಭಿವೃದ್ಧಿ ಕೆಲಸಗಳು ಕೇವಲ 6 ವಾರ್ಡ್ಗಳಿಗೆ ಮಾತ್ರ ಸೀಮಿತವಾಗಿದೆ. ಉಳಿದ ವಾರ್ಡ್ಗಳು ಅಭಿವೃದ್ಧಿ ಆಗಬೇಕಿದ್ದು, ‘ಗ್ರೇಟರ್ ತುಮಕೂರು’ ನಿರ್ಮಾಣಕ್ಕೆ ₹500 ಕೋಟಿ ಕೊಡುವಂತೆ ಮುಖ್ಯಮಂತ್ರಿಗೆ ಬೇಡಿಕೆ ಸಲ್ಲಿಸಲಾಗುವುದು. ವಿಶ್ವವಿದ್ಯಾಲಯದ ಹೊಸ ಕ್ಯಾಂಪಸ್ ಮತ್ತಷ್ಟು ಅಭಿವೃದ್ಧಿಯಾಗಬೇಕಿದ್ದು, ಹೆಚ್ಚುವರಿಯಾಗಿ ಹಣ ನೀಡುವಂತೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.