ರೈಲು ಸಂಚಾರ ಸ್ಥಗಿತಗೊಳ್ಳುವ ಈ ನಾಲ್ಕು ದಿನ (ನ.14ರಿಂದ 17) ಆರ್.ವಿ. ರಸ್ತೆ ಮತ್ತು ಯಲಚೇನಹಳ್ಳಿ ಮೆಟ್ರೊ ನಿಲ್ದಾಣಗಳ ನಡುವೆ ಬಿಎಂಟಿಸಿ ಬಸ್ ಸೇವೆ ಕಲ್ಪಿಸಲಾಗಿದೆ. ಮೊದಲ ಮೂರು ದಿನ ಆರ್.ವಿ. ರಸ್ತೆ ನಿಲ್ದಾಣದಿಂದ ಬೆಳಿಗ್ಗೆ 5.30ರಿಂದ ರಾತ್ರಿ 11.45ರವರೆಗೆ ಮತ್ತು ಯಲಚೇನಹಳ್ಳಿ ನಿಲ್ದಾಣದಿಂದ ಬೆಳಿಗ್ಗೆ 4.45ರಿಂದ ರಾತ್ರಿ 10.30ರವರೆಗೆ ಬಸ್ ವ್ಯವಸ್ಥೆ ಮಾಡಲಾಗಿದೆ. ಕೊನೆಯ ದಿನ ಅಂದರೆ, ನ.17ರಂದು ಯಲಚೇನಹಳ್ಳಿಯಿಂದ ಬೆಳಿಗ್ಗೆ 6.30ಕ್ಕೆ ಮತ್ತು ಆರ್.ವಿ. ರಸ್ತೆಯಿಂದ ಬೆಳಿಗ್ಗೆ 7.15ಕ್ಕೆ ಬಸ್ ಸೇವೆ ಪ್ರಾರಂಭವಾಗಲಿದೆ. ಈ ಬಸ್ಗಳು ಬನಶಂಕರಿ ಮತ್ತು ಜೆ.ಪಿ. ನಗರದ ಮೆಟ್ರೊ ನಿಲ್ದಾಣದಲ್ಲಿ ನಿಲುಗಡೆಯಾಗಲಿವೆ ಎಂದು ನಿಗಮ ಹೇಳಿದೆ.