<p><strong>ಬಾಗೇಪಲ್ಲಿ:</strong> ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತಾಲ್ಲೂಕು ಸಿಐಟಿಯು ನೇತೃತ್ವದಲ್ಲಿ ಬುಧವಾರ ಅಕ್ಷರ ದಾಸೋಹ ನೌಕರರ ಸಂಘದ ತಾಲ್ಲೂಕು ಸಮಿತಿ ಸದಸ್ಯರು ತಾಲ್ಲೂಕು ಪಂಚಾಯಿತಿ ಕಚೇರಿ ಮುಂದೆ ಪ್ರತಿಭಟಿಸಿದರು.</p>.<p>ಸಿಐಟಿಯು ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಆಂಜನೇಯರೆಡ್ಡಿ ಮಾತನಾಡಿ, ಬಡ ಮಹಿಳೆಯರಿಗೆ, ವಿಚ್ಛೇದಿತ ಮಹಿಳೆಯರು, ವಿಧವೆಯರು ಬಿಸಿಯೂಟದ ಉದ್ಯೋಗವನ್ನೇ ನಂಬಿದ್ದಾರೆ. 4 ತಿಂಗಳಿಂದ ಆದಾಯ ಇಲ್ಲದೇ ಸಂಕಷ್ಟದಲ್ಲಿ ಇದ್ದಾರೆ. ಶಾಲೆಗಳನ್ನು ಮುಚ್ಚಿರುವುದರಿಂದ ಬಿಸಿಯೂಟ ನೌಕರರೇ ವಿದ್ಯಾರ್ಥಿಗಳ ಮನೆಗಳಿಗೆ ಆಹಾರ ಸಾಮಾಗ್ರಿಗಳನ್ನು ತಲುಪಿಸುತ್ತಿದ್ದಾರೆ. ನೌಕರರಿಗೆ ಏಪ್ರಿಲ್ ತಿಂಗಳಿನಿಂದ ಸಂಬಳ ನೀಡಿಲ್ಲ. ಆರ್ಥಿಕ ಪ್ಯಾಕೇಜ್ ಸಹ ಸರ್ಕಾರ ಘೊಷಣೆ ಮಾಡಿಲ್ಲ. ಇದರಿಂದ ನೌಕರರು ಜೀವನ ಸಾಗಿಸಲು ಕಷ್ಟ ಆಗಿದೆ ಎಂದು ತಿಳಿಸಿದರು.</p>.<p>ಅಕ್ಷರ ದಾಸೋಹ ನೌಕರರ ಸಂಘದ ತಾಲ್ಲೂಕು ಸಮಿತಿ ಅಧ್ಯಕ್ಷ ಜಿ.ಮುಸ್ತಾಫ ಮಾತನಾಡಿದರು. ಪ್ರತಿಭಟನಾ ಸ್ಥಳಕ್ಕೆ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಎಚ್.ಎನ್.ಮಂಜುನಾಥಸ್ವಾಮಿ ಭೇಟಿ ನೀಡಿ ಮನವಿ ಪಡೆದರು.</p>.<p>ಅಕ್ಷರ ದಾಸೋಹ ನೌಕರರ ಸಂಘದ ತಾಲ್ಲೂಕು ಸಮಿತಿ ಪ್ರಧಾನ ಕಾರ್ಯದರ್ಶಿ ಅಮರಾವತಿ, ಖಜಾಂಚಿ ರಾಮಾಂಜಿನಮ್ಮ, ರಾಜಮ್ಮ, ಶಾಂತಮ್ಮ, ಅನಿತಾ, ಎ.ರಾಧಮ್ಮ, ಅಲುವೇಲಮ್ಮ, ಸರಿತಾ, ಆದಿಲಕ್ಷ್ಮಮ್ಮ, ಕೆ.ಮಂಗಮ್ಮ, ನಾಗಮಣಿಯಮ್ಮ, ಮುಬೀನಾ, ಎನ್.ರತ್ನಮ್ಮ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗೇಪಲ್ಲಿ:</strong> ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತಾಲ್ಲೂಕು ಸಿಐಟಿಯು ನೇತೃತ್ವದಲ್ಲಿ ಬುಧವಾರ ಅಕ್ಷರ ದಾಸೋಹ ನೌಕರರ ಸಂಘದ ತಾಲ್ಲೂಕು ಸಮಿತಿ ಸದಸ್ಯರು ತಾಲ್ಲೂಕು ಪಂಚಾಯಿತಿ ಕಚೇರಿ ಮುಂದೆ ಪ್ರತಿಭಟಿಸಿದರು.</p>.<p>ಸಿಐಟಿಯು ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಆಂಜನೇಯರೆಡ್ಡಿ ಮಾತನಾಡಿ, ಬಡ ಮಹಿಳೆಯರಿಗೆ, ವಿಚ್ಛೇದಿತ ಮಹಿಳೆಯರು, ವಿಧವೆಯರು ಬಿಸಿಯೂಟದ ಉದ್ಯೋಗವನ್ನೇ ನಂಬಿದ್ದಾರೆ. 4 ತಿಂಗಳಿಂದ ಆದಾಯ ಇಲ್ಲದೇ ಸಂಕಷ್ಟದಲ್ಲಿ ಇದ್ದಾರೆ. ಶಾಲೆಗಳನ್ನು ಮುಚ್ಚಿರುವುದರಿಂದ ಬಿಸಿಯೂಟ ನೌಕರರೇ ವಿದ್ಯಾರ್ಥಿಗಳ ಮನೆಗಳಿಗೆ ಆಹಾರ ಸಾಮಾಗ್ರಿಗಳನ್ನು ತಲುಪಿಸುತ್ತಿದ್ದಾರೆ. ನೌಕರರಿಗೆ ಏಪ್ರಿಲ್ ತಿಂಗಳಿನಿಂದ ಸಂಬಳ ನೀಡಿಲ್ಲ. ಆರ್ಥಿಕ ಪ್ಯಾಕೇಜ್ ಸಹ ಸರ್ಕಾರ ಘೊಷಣೆ ಮಾಡಿಲ್ಲ. ಇದರಿಂದ ನೌಕರರು ಜೀವನ ಸಾಗಿಸಲು ಕಷ್ಟ ಆಗಿದೆ ಎಂದು ತಿಳಿಸಿದರು.</p>.<p>ಅಕ್ಷರ ದಾಸೋಹ ನೌಕರರ ಸಂಘದ ತಾಲ್ಲೂಕು ಸಮಿತಿ ಅಧ್ಯಕ್ಷ ಜಿ.ಮುಸ್ತಾಫ ಮಾತನಾಡಿದರು. ಪ್ರತಿಭಟನಾ ಸ್ಥಳಕ್ಕೆ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಎಚ್.ಎನ್.ಮಂಜುನಾಥಸ್ವಾಮಿ ಭೇಟಿ ನೀಡಿ ಮನವಿ ಪಡೆದರು.</p>.<p>ಅಕ್ಷರ ದಾಸೋಹ ನೌಕರರ ಸಂಘದ ತಾಲ್ಲೂಕು ಸಮಿತಿ ಪ್ರಧಾನ ಕಾರ್ಯದರ್ಶಿ ಅಮರಾವತಿ, ಖಜಾಂಚಿ ರಾಮಾಂಜಿನಮ್ಮ, ರಾಜಮ್ಮ, ಶಾಂತಮ್ಮ, ಅನಿತಾ, ಎ.ರಾಧಮ್ಮ, ಅಲುವೇಲಮ್ಮ, ಸರಿತಾ, ಆದಿಲಕ್ಷ್ಮಮ್ಮ, ಕೆ.ಮಂಗಮ್ಮ, ನಾಗಮಣಿಯಮ್ಮ, ಮುಬೀನಾ, ಎನ್.ರತ್ನಮ್ಮ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>